ಕಾರ್ತೀಕ್‌ ಅದ್ವೈತ್‌ ನಿರ್ದೇಶನದಲ್ಲಿ ಶಿವರಾಜಕುಮಾರ್‌ ನಟಿಸಲಿರುವ ಸಿನಿಮಾಗೆ ಸದ್ಯದಲ್ಲೇ ಮುಹೂರ್ತ ನೆರವೇರಲಿದೆ. ಇದು ಶಿವರಾಜಕುಮಾರ್‌ ಅವರ 131ನೇ ಚಿತ್ರ. ಇದಕ್ಕೆ ಸಂಬಂಧಿಸಿದಂತೆ ಚಿತ್ರತಂಡದವರು ಶಿವರಾಜಕುಮಾರ್‌ ಅವರನ್ನು ಭೇಟಿ ಮಾಡಿದ್ದಾರೆ.

ಶಿವರಾಜಕುಮಾರ್‌ ನಟನೆಯ 131ನೇ ಸಿನಿಮಾದ ಅಪ್‌ಡೇಟ್ಸ್‌ ಸಿಕ್ಕಿದೆ. ಮೊನ್ನೆಯಷ್ಟೇ ಶಿವರಾಜಕುಮಾರ್‌ ಬರ್ತ್‌ಡೇಗೆ ಈ ಚಿತ್ರತಂಡ ಇಂಟ್ರಡಕ್ಷನ್‌ ಟೀಸರ್‌ ರಿಲೀಸ್‌ ಮಾಡಿತ್ತು. ಇದೀಗ ಸಿನಿಮಾದ ಮುಹೂರ್ತದ ಬಗ್ಗೆ ಅಪ್‌ಡೇಟ್ಸ್‌ ಕೊಡುವ ಸಿದ್ಧತೆ ನಡೆಸಿದೆ. ಪ್ರೀ ಪ್ರೊಡಕ್ಷನ್‌ ಕೆಲಸಗಳು ಮುಗಿದಿದ್ದು, ತಂಡ ಚಿತ್ರೀಕರಣಕ್ಕೆ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ತಂಡ ಶಿವಣ್ಣನನ್ನು ಭೇಟಿ ಮಾಡಿದೆ. ನಿರ್ದೇಶಕ ಕಾರ್ತಿಕ್ ಅದ್ವೈತ್, ನಿರ್ಮಾಪಕರಾದ ಎನ್ ಎಸ್ ರೆಡ್ಡಿ ಹಾಗೂ ಸುಧೀರ್, ಛಾಯಾಗ್ರಹಕ ಎ ಜೆ ಶೆಟ್ಟಿ, ಸಂಕಲನಕಾರ ದೀಪು ಎಸ್ ಕುಮಾರ್ ಅವರು ಶಿವರಾಜಕುಮಾರ್‌ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ಈ ಚಿತ್ರದ ನಿರ್ದೇಶನದೊಂದಿಗೆ ಕಾರ್ತಿಕ್ ಅದ್ವೈತ್ ಚಂದನವನಕ್ಕೆ ಬರುತ್ತಿದ್ದಾರೆ. ಇವರಿಗೆ ಇದು ನಿರ್ದೇಶಕನಾಗಿ ಎರಡನೇ ಸಿನಿಮಾ. ಇದೊಂದು ಆ್ಯಕ್ಷನ್ – ಥ್ರಿಲ್ಲರ್ ಸಿನಿಮಾವಾಗಿದ್ದು, ಶಿವ ರಾಜಕುಮಾರ್‌ ಭಿನ್ನ ಲುಕ್‌, ವಿಶಿಷ್ಟ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ‘ಘೋಸ್ಟ್’ ಸಿನಿಮಾ ಖ್ಯಾತಿಯ ವಿ ಎಂ ಪ್ರಸನ್ನ ಮತ್ತು ‘ಸೀತಾರಾಮಂ’ ಸಿನಿಮಾ ಖ್ಯಾತಿಯ ಜಯಕೃಷ್ಣ ಬರಹಗಾರರಾಗಿ ಕೆಲಸ ಮಾಡುತ್ತಿದ್ದಾರೆ. ವಿಕ್ರಂ ವೇದ, ಆರ್ ಡಿ ಎಕ್ಸ್, ಖೈದಿ ಸಿನಿಮಾ ಖ್ಯಾತಿಯ ಸ್ಯಾಮ್ ಸಿ ಎಸ್ ಸಂಗೀತ ಒದಗಿಸಲಿದ್ದಾರೆ. ಎ ಜೆ ಶೆಟ್ಟಿ ಛಾಯಾಗ್ರಹಣ ನಿರ್ವಹಿಸಲಿದ್ದಾರೆ. ದೀಪು ಎಸ್ ಕುಮಾರ್ ಅವರ ಸಂಕಲನ ಹಾಗೂ ರವಿ ಸಂತೆಹಕ್ಲು ಕಲಾ ನಿರ್ದೇಶನ ಚಿತ್ರಕ್ಕಿರಲಿದೆ. ಭುವನೇಶ್ವರಿ ಪ್ರೊಡಕ್ಷನ್ ನಡಿ ಎಸ್ ಎನ್ ರೆಡ್ಡಿ ಹಾಗೂ ಸುಧೀರ್ ಪಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

LEAVE A REPLY

Connect with

Please enter your comment!
Please enter your name here