ಹಲವು ದಿನಗಳಿಂದ ಸುದ್ದಿಯಲ್ಲಿರುವ ಸೌಜನ್ಯ ಅತ್ಯಾಚಾರ – ಹತ್ಯೆ ಪ್ರಕರಣದ ಬಗ್ಗೆ ನಟ ದುನಿಯಾ ವಿಜಯ್‌ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ. ಸಂತ್ರಸ್ಥರಿಗೆ ನ್ಯಾಯ ಸಿಗುವವರೆಗೂ ತಾವು ಧರ್ಮಸ್ಥಳಕ್ಕೆ ಹೋಗುವುದಿಲ್ಲ ಎನ್ನುವ ಅವರ ಪೋಸ್ಟ್‌ ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದಲ್ಲಿನ 2012ರ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಕೆಲವು ತಿಂಗಳುಗಳಿಂದ ಚರ್ಚೆ ನಡೆಯುತ್ತಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಬಂಧನವೂ ಆಗಿದೆ. ಆದರೆ ವಿವಾದಿತ ವಿಷಯದ ಬಗೆಗಿನ ಪರ – ವಿರೋಧದ ಚರ್ಚೆ ನಿಂತಿಲ್ಲ. ನಟ ದುನಿಯ ವಿಜಯ್‌ ಇಂದು ತಮ್ಮ ಫೇಸ್‌ಬುಕ್‌ ಪೇಜ್‌ನಲ್ಲಿ ಪ್ರಕರಣದ ಬಗ್ಗೆ Hashtags ಬಳಕೆ ಮಾಡಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ನಟ ದುನಿಯ ವಿಜಯ್‌ ಅವರ ಪೋಸ್ಟ್‌ನಲ್ಲಿರುವ ಒಕ್ಕಣಿ ಈ ರೀತಿ ಇದೆ – ‘ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು, ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ. ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಮಾಚಲಾಗದು – ಬುದ್ಧ’

https://www.facebook.com/plugins/post.php?href=https%3A%2F%2Fwww.facebook.com%2FDuniyaVijayOfficial%2Fposts%2Fpfbid0xNQgWm9SzadNhcKoM1URGgjch5tQ737nYMY2KWy87PXKxfLZBzXNJWhH3hexArrVl&show_text=true&width=500

LEAVE A REPLY

Connect with

Please enter your comment!
Please enter your name here