ಇಪ್ಪತ್ತು ವರ್ಷಗಳ ಹಿಂದೆ ಮಾಲಾಶ್ರೀ ಅವರಿಗಾಗಿ ‘ದುರ್ಗಿ’ ಸಿನಿಮಾ ನಿರ್ದೇಶಿಸಿದ್ದ ರವಿಶಂಕರ್‌ ನಟನೆಯಲ್ಲಿ ಬ್ಯುಸಿಯಾಗಿದ್ದರು. ಇದೀಗ ಅವರು ನಿರ್ದೇಶನಕ್ಕೆ ಮರಳಿದ್ದು, ಪುತ್ರ ಅದ್ವೆ ಅವರಿಗಾಗಿ ‘ಸುಬ್ರಹ್ಮಣ್ಯ’ ಸಿನಿಮಾ ಮಾಡುತ್ತಿದ್ದಾರೆ. ಈ PAN ಇಂಡಿಯಾ ಚಿತ್ರಕ್ಕೆ ಪ್ರತಿಭಾವಂತ ತಂತ್ರಜ್ಞರು ಚಿತ್ರಕ್ಕೆ ಕೆಲಸ ಮಾಡುತ್ತಿದ್ದಾರೆ.

ದಕ್ಷಿಣ ಭಾರತ ಚಿತ್ರರಂಗದಲ್ಲಿ ನಟ ರವಿಶಂಕರ್‌ ಚಿರಪರಿಚಿತ ನಟ. ‘ಕೆಂಪೇಗೌಡ’ ಚಿತ್ರದ ‘ಆರ್ಮುಗಂ’ ಪಾತ್ರ ಅವರ ನಟನಾ ಬದುಕಿಗೆ ತಿರುವಾಯ್ತು. ಈ ಚಿತ್ರದ ನಂತರ ಅವರು ‘ಆರ್ಮುಗಂ ರವಿಶಂಕರ್‌’ ಎಂದೇ ಜನಪ್ರಿಯರಾದರು. ಇದೀಗ ನಟ ರವಿಶಂಕರ್‌ ನಿರ್ದೇಶನಕ್ಕೆ ಮರಳುತ್ತಿದ್ದಾರೆ. 20 ವರ್ಷಗಳ ಹಿಂದೆ ನಟಿ ಮಾಲಾಶ್ರೀ ಅವರಿಗೆ ಮೊದಲ ಬಾರಿ ರವಿಶಂಕರ್‌ ಆಕ್ಷನ್‌ – ಕಟ್‌ ಹೇಳಿದ್ದರು. ಅವರು ನಿರ್ದೇಶಿಸಿದ್ದ ‘ದುರ್ಗಿ’ ಸಿನಿಮಾ ಸೂಪರ್‌ಹಿಟ್‌ ಆಗಿದ್ದಷ್ಟೇ ಅಲ್ಲದೆ ತೆಲುಗಿಗೂ ರೀಮೇಕ್‌ ಆಗಿತ್ತು. ನಂತರ ನಟನೆಯಲ್ಲಿ ತೊಡಗಿಸಿಕೊಂಡಿದ್ದ ಅವರು ಇದೀಗ ಮತ್ತೆ ನಿರ್ದೇಶನಕ್ಕೆ ಮರಳುತ್ತಿದ್ದಾರೆ. ತಮ್ಮ ಪುತ್ರ ಅದ್ವೆ ಅವರಿಗೆ ಸಿನಿಮಾ ನಿರ್ದೇಶಿಸಲಿದ್ದಾರೆ ಎನ್ನುವುದು ವಿಶೇಷ.

ರವಿಶಂಕರ್‌ ಪುತ್ರ ಅದ್ವೆ ವಿದೇಶದಲ್ಲಿ ನಟನಾ ತರಬೇತಿ ಪಡೆದುಕೊಂಡಿದ್ದಾರೆ. ವಿದ್ಯಾಭ್ಯಾಸ ಮುಗಿಸಿ ವಾಪಾಸ್ ಹುಟ್ಟೂರಿಗೆ ಮರಳಿರುವ ಮಗನನ್ನು ಬಣ್ಣದ ಜಗತ್ತಿಗೆ ಪರಿಚಯಿಸುತ್ತಿದ್ದಾರೆ ರವಿಶಂಕರ್‌. ಅದ್ವೆ ಚೊಚ್ಚಲ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆ‌ ಮಾಡಲಾಗಿದೆ. ಈ ಚಿತ್ರಕ್ಕೆ ‘ಸುಬ್ರಹ್ಮಣ್ಯ’ ಎಂಬ ಕ್ಯಾಚಿ ಟೈಟಲ್ ನಿಗಧಿಯಾಗಿದೆ. ಪೋಸ್ಟರ್‌ನಲ್ಲಿ ದೈವಿಕ ಅಂಶಗಳು ಹೈಲೆಟ್ ಆಗಿವೆ. ಪೋಸ್ಟರ್‌ನಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ದೇವಸ್ಥಾನ ಮತ್ತು ಅವರ ವಾಹನ ನವಿಲನ್ನು ತೋರಿಸಲಾಗಿದೆ. ನಾಯಕ ಅದ್ವೆ ಒಂದು ಕೈಯಲ್ಲಿ ಜ್ವಾಲೆಯನ್ನು ಮತ್ತು ಇನ್ನೊಂದು ಕೈಯಲ್ಲಿ ಗ್ರಂಥವೊಂದನ್ನು ಹಿಡಿದಿದ್ದಾರೆ. ‘ಅರ್ಜುನ್ ರೆಡ್ಡಿ’ ಸಿನಿಮಾ ಖ್ಯಾತಿಯ ರಾಜ್ ತೋಟ ಛಾಯಾಗ್ರಹಣ, ರವಿ ಬಸ್ರೂರ್ ಸಂಗೀತ, ವಿಜಯ್ ಎಂ ಕುಮಾರ್ ಸಂಕಲನ, ಮಾಸ್ತಿ ಸಂಭಾಷಣೆ ಚಿತ್ರಕ್ಕೆ ಇರಲಿದೆ. ಎಸ್ ಜಿ ಮೂವೀ ಮೇಕರ್ಸ್ ಬ್ಯಾನರ್‌ನಡಿ ತಿರುಮಲ ರೆಡ್ಡಿ ಮತ್ತು ಅನಿಲ್ ಕಡಿಯಾಲ ಚಿತ್ರ ನಿರ್ಮಿಸುತ್ತಿದ್ದಾರೆ. ಡಿಸೆಂಬರ್‌ನಲ್ಲಿ ಶೂಟಿಂಗ್‌ ಆರಂಭವಾಗಲಿದೆ.

LEAVE A REPLY

Connect with

Please enter your comment!
Please enter your name here