‘ಜವಾನ್‌’ ಬಿಡುಗಡೆ ಹಿನ್ನೆಲೆಯಲ್ಲಿ ಚಿತ್ರದ ತಾರೆಯರಾದ ಶಾರುಖ್‌ ಖಾನ್‌, ನಯನತಾರಾ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು (ಮಂಗಳವಾರ) ಬೆಳಗ್ಗೆ ಪುತ್ರಿ ಸುಹಾನಾ ಜೊತೆ ಶಾರುಖ್‌ ತಿರುಪತಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ನಟಿ ನಯನತಾರಾ ಕೂಡ ಅವರಿಗೆ ಜೊತೆಯಾಗಿದ್ದಾರೆ.

ಅಟ್ಲೀ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ ‘ಜವಾನ್‌’ ನಾಡಿದ್ದು ಸೆಪ್ಟೆಂಬರ್‌ 7ರಂದು ತೆರೆಕಾಣುತ್ತಿದೆ. ಬಿಡುಗಡೆ ಹಿನ್ನೆಲೆಯಲ್ಲಿ ಚಿತ್ರದ ತಾರೆಯರಾದ ಶಾರುಖ್‌, ನಯನತಾರಾ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು ಬೆಳಗ್ಗೆ ಚಿತ್ರತಂಡ​ ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದೆ. ಜಮ್ಮುವಿನ ವೈಷ್ಣೋದೇವಿ ದರ್ಶನದ ಬಳಿಕ ನಟರು ತಿರುಪತಿಗೆ ಭೇಟಿ ನೀಡಿದ್ದು, ಜಗತ್‌ ಪ್ರಸಿದ್ದ ಶ್ರೀ ವೆಂಕಟೇಶ್ವರ ದೇವರಿಗೆ ಪೂಜೆ, ಪ್ರಾರ್ಥನೆ ಸಲ್ಲಿಸಿದ್ದಾರೆ. ಇವರ ಜೊತೆಗೆ ಶಾರುಖ್‌ ಪುತ್ರಿ ಸುಹಾನಾ ಖಾನ್‌, ಮತ್ತು ನಯನತಾರಾ ಪತಿ ವಿಘ್ನೇಶ್‌ ಶಿವನ್‌ ಸೇರಿದಂತೆ ಹಲವರು ಹಾಜರಿದ್ದರು. ಬಾಲಿವುಡ್‌ನ ಬಹುನಿರೀಕ್ಷಿತ ‘ಜವಾನ್’ ಸಿನಿಮಾ ಸೆಪ್ಟೆಂಬರ್‌ 7ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ 6 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳು ಮಾರಾಟವಾಗಿವೆ. ಸಿನಿಮಾದ ಪ್ರಚಾರ ಭರ್ಜರಿಯಾಗಿ ಸಾಗುತ್ತಿದ್ದು, ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ‌Red Chillies Entertainment ಬ್ಯಾನರ್ ಅಡಿ ಗೌರಿ ಖಾನ್ ಸಿನಿಮಾ ನಿರ್ಮಿಸಿದ್ದು, ಅನಿರುದ್ಧ ರವಿಚಂದರ್‌ ಸಂಗೀತ ಸಂಯೋಜಿಸಿದ್ದಾರೆ. ವಿಜಯ್‌ ಸೇತುಪತಿ, ಪ್ರಿಯಾಮಣಿ, ಯೋಗಿ ಬಾಬು, ಸಾನ್ಯಾ ಮಲ್ಹೋತ್ರಾ, ಸುನಿಲ್‌ ಗ್ರೋವರ್‌, ರಿದ್ಧಿ ಡೋಗ್ರಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

LEAVE A REPLY

Connect with

Please enter your comment!
Please enter your name here