ಮರಳು ಶಿಲ್ಪಿ ಮಾನಸ್‌ ಕುಮಾರ್‌ ಒರಿಸ್ಸಾದ ಸಮುದ್ರ ತೀರದಲ್ಲಿ ನಟ ಸುದೀಪ್‌ ಅವರ ಮರಳು ಶಿಲ್ಪ ರಚಿಸುವ ಮೂಲಕ ನಟನ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ. ದಕ್ಷಿಣ ಭಾರತದ ಸಿನಿಮಾ ನಟರ ಪೈಕಿ ಹಿಂದೆ ವಿಷ್ಣುವರ್ಧನ್‌ ಅವರಿಗೆ ಈ ಗೌರವ ಲಭಿಸಿತ್ತು.

ನಟ ಸುದೀಪ್‌ ಪ್ಯಾನ್‌ ಇಂಡಿಯಾ ನಟ. ದಕ್ಷಿಣದ ಪ್ರಾದೇಶಿಕ ಭಾಷೆಗಳಲ್ಲದೆ ಹಿಂದಿ ಚಿತ್ರಗಳಲ್ಲೂ ಅಭಿನಯಿಸಿರುವ ಅವರಿಗೆ ದೇಶದ ಹಲವೆಡೆ ಅಭಿಮಾನಿಗಳಿದ್ದಾರೆ. ಸೆಪ್ಟೆಂಬರ್ 2 ಸುದೀಪ್ ಜನ್ಮದಿನ. ಈ ಜನ್ಮದಿನವನ್ನು ಸ್ಮರಣೀಯವಾಗಿಸಲು ಮರಳು ಶಿಲ್ಪಿ ಮಾನಸ್ ಕುಮಾರ್ ಒರಿಸ್ಸಾದ ಸಮುದ್ರ ತೀರದಲ್ಲಿ ಸುದೀಪ್ ಅವರ ಮರಳು ಶಿಲ್ಪ ನಿರ್ಮಿಸುವ ಮೂಲಕ ಶುಭಾಶಯ ಕೋರಿದ್ದಾರೆ. ಈ ಶಿಲ್ಪವು 20 ಅಡಿ ಅಗಲ, 7 ಅಡಿ ಎತ್ತರವಿದೆ. ಶಿಲ್ಪಕ್ಕಾಗಿ ಸುಮಾರು 20 ಟನ್ ಮರಳನ್ನು ಬಳಸಲಾಗಿದೆ. ಸುದೀಪ್ ಅವರ ಆಪ್ತರಾದ ವೀರಕಪುತ್ರ ಶ್ರೀನಿವಾಸ ಅವರು ಯಾವ ಫೋಟೋ ಬಳಸಬೇಕು ಮತ್ತು ಕನ್ನಡ ಬರವಣಿಗೆ ಹೇಗಿರಬೇಕು ಎನ್ನುವ ಕುರಿತು ಮಾನಸ್‌ರಿಗೆ ಅಗತ್ಯ ಮಾಹಿತಿ ನೀಡಿ ನೆರವಾಗಿದ್ದಾರೆ.

ದಕ್ಷಿಣ ಭಾರತದಲ್ಲಿಯೇ ಈ ಮರಳು ಶಿಲ್ಪ ಗೌರವಕ್ಕೆ ಪಾತ್ರವಾಗುತ್ತಿರುವ ಎರಡನೇ ಕಲಾವಿದ ಸುದೀಪ್. ಈ ಹಿಂದೆ 2020ರಲ್ಲಿ ವಿಷ್ಣುವರ್ಧನ್ ಅವರ 70ನೇ ಜನ್ಮದಿನ ಪ್ರಯುಕ್ತ ಮರಳು ಶಿಲ್ಪದ ಗೌರವ ನೀಡಲಾಗಿತ್ತು. ಅದರ ಹೊರತಾಗಿ ಇದುವರೆಗೆ ಯಾವುದೇ ದಕ್ಷಿಣ ಭಾರತದ ನಟರಿಗೆ ಈ ಗೌರವ ದಕ್ಕಿರಲಿಲ್ಲ. ಈಗ ಎರಡನೆಯವರಾಗಿ ಕಿಚ್ಚ ಸುದೀಪ್ ಅವರು ಈ ಗೌರವವಕ್ಕೆ ಪಾತ್ರರಾಗಿದ್ದಾರೆ. ನಿನ್ನೆ ತಾನೇ ಅಂಚೆ ಇಲಾಖೆಯಿಂದ ವಿಶೇಷ ಲಕೋಟೆಯ ಗೌರವವನ್ನು ಪಡೆದಿದ್ದ ಸುದೀಪ್ ಅವರು ಈಗ ಮರಳು ಶಿಲ್ಪ ಗೌರವಕ್ಕೂ ಪಾತ್ರರಾಗಿರುವುದು ಅವರ ಅಭಿಮಾನಿಗಳನ್ನು ಖುಷಿ ತಂದಿದೆ.

Previous articleಇದು ಕ್ರೈಂ ಕಥೆಯೂ ಹೌದು, ಅದನ್ನು ತಡೆಯುವವರ ಕಥೆಯೂ ಹೌದು
Next articleಒಲವೇ ಮರೆಯದ ಮಮಕಾರ

LEAVE A REPLY

Connect with

Please enter your comment!
Please enter your name here