ನಟಿ ಮಾಲಾಶ್ರೀ ಮತ್ತು ಚಿತ್ರನಿರ್ಮಾಪಕ ರಾಮು ಪುತ್ರಿ ರಾಧನಾ ರಾಮ್‌ ಅವರು ತಮ್ಮ ಹೆಸರನ್ನು ಆರಾಧನಾ ಎಂದು ಬದಲಿಸಿಕೊಂಡಿದ್ದಾರೆ. ಸದ್ಯ ಅವರೀಗ ‘ಕಾಟೇರ’ ಚಿತ್ರದಲ್ಲಿ ದರ್ಶನ್‌ರಿಗೆ ನಾಯಕಿಯಾಗಿ ನಟಿಸುತ್ತಿದ್ದು, ಚಿತ್ರೀಕರಣ ಜಾರಿಯಲ್ಲಿದೆ. ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣ, ತರುಣ್‌ ಸುಧೀರ್‌ ನಿರ್ದೇಶನದ ಚಿತ್ರವಿದು.

ನಟಿ ಮಾಲಾಶ್ರೀ – ನಿರ್ಮಾಪಕ ರಾಮು ಪುತ್ರಿ ರಾಧನಾ ರಾಮ್ ಈಗ ತಮ್ಮ ಹೆಸರನ್ನು ಆರಾಧನಾ (Aradhanaa) ಎಂದು ಬದಲಿಸಿಕೊಂಡಿದ್ದಾರೆ. ರಾಕ್‌ಲೈನ್ ವೆಂಕಟೇಶ್ ನಿರ್ಮಾಣ, ತರುಣ್ ಸುಧೀರ್ ನಿರ್ದೇಶನದಲ್ಲಿ ದರ್ಶನ್ ನಾಯಕರಾಗಿ ನಟಿಸಿರುವ ‘ಕಾಟೇರ’ ಚಿತ್ರದ ನಾಯಕಿಯಾಗಿ ಆರಾಧನಾ ಅವರು ಈಗಾಗಲೇ ಚಿತ್ರರಂಗ ಪ್ರವೇಶಿಸಿದ್ದಾರೆ. ‘ನಾನು, ರಾಕ್‌ಲೈನ್‌ ವೆಂಕಟೇಶ್ ಹಾಗೂ ತರುಣ್ ಸುಧೀರ್ ಮೂರು ಜನ ಚರ್ಚಿಸಿ ಆರಾಧನಾ ಎಂಬ ಹೆಸರನ್ನು ಆಯ್ಕೆ ಮಾಡಿದ್ದೇವೆ. ಈ ಹೆಸರು ಬರೀ ‘ಕಾಟೇರ’ ಚಿತ್ರಕ್ಕೆ ಮಾತ್ರವಲ್ಲ. ಇನ್ನು ಮುಂದೆ ನನ್ನ ಮಗಳ ಹೆಸರು ಆರಾಧನಾ. ಮುಂದಿನ ಚಿತ್ರಗಳಲ್ಲೂ ಆರಾಧನಾ ಎಂಬ ಹೆಸರಿನಿಂದಲೇ ಅಭಿನಯಿಸಲಿದ್ದಾಳೆ. ತಾವೆಲ್ಲರೂ ಮುಂದೆ ಆರಾಧನಾ ಹೆಸರಿನಿಂದಲೇ ಅವಳನ್ನು ಕರೆಯಿರಿ’ ಎಂದು ನಟಿ ಮಾಲಾಶ್ರೀ ವಿನಂತಿಸಿದ್ದಾರೆ.

https://twitter.com/Kaatera_film/status/1625958111721967616?ref_src=twsrc%5Etfw%7Ctwcamp%5Etweetembed%7Ctwterm%5E1625958111721967616%7Ctwgr%5E9772294f32d3101d4eb9401d8d167b9db1d5c865%7Ctwcon%5Es1_c10&ref_url=https%3A%2F%2Fpublish.twitter.com%2F%3Fquery%3Dhttps3A2F2Ftwitter.com2FKaatera_film2Fstatus2F1625958111721967616widget%3DTweet

LEAVE A REPLY

Connect with

Please enter your comment!
Please enter your name here