ಸಂಜೀವ್‌ ಗಾವಂಡಿ ನಿರ್ದೇಶನದ ‘ಅಡವಿಕಟ್ಟೆ’ ಸಸ್ಪೆನ್ಸ್‌ – ಹಾರರ್‌ ಸಿನಿಮಾದ ಟ್ರೇಲರ್‌ ಬಿಡುಗಡೆಯಾಗಿದೆ. ಮಾಜಿ ಸಂಸದ ಡಿ ಕೆ ಸುರೇಶ್‌ ಅವರು ಟ್ರೇಲರ್‌ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಅಭಿಜಿತ್‌ ಮತ್ತು ನಾಗರಾಜ್‌ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

‘ಇದೊಂದು ಸಸ್ಪೆನ್ಸ್ – ಹಾರರ್‌ ಜಾನಾರ್ ಚಿತ್ರ. ಕನ್ನಡದಲ್ಲಿ ಈ ಜಾನರ್‌ನ ಸಾಕಷ್ಟು ಚಿತ್ರಗಳು ಬಂದಿವೆಯಾದರೂ ಇದು ಭಿನ್ನವಾಗಿದೆ. ಚಿತ್ರದ ಹೆಸರೇ ಹೇಳುವಂತೆ ಅಡವಿ ಅಂದರೆ ಕಾಡಿನಲ್ಲಿ ನಡೆಯುವ ಕಥೆ. ಗೋಕಾಕ್ ನಗರದ ಸುತ್ತಮುತ್ತ ಹೆಚ್ಚಿನ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ’ ಎನ್ನುತ್ತಾರೆ ‘ಅಡವಿಕಟ್ಟೆ’ ಸಿನಿಮಾದ ನಿರ್ದೇಶಕ ಸಂಜೀವ್‌ ಗಾವಂಡಿ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿಜಿತ್‌ ಮತ್ತು ನಾಗರಾಜು ನಟಿಸಿದ್ದಾರೆ. ಮಾಜಿ ಸಂಸದ ಡಿ ಕೆ ಸುರೇಶ್ ಟ್ರೇಲರ್ ಬಿಡುಗಡೆಗೊಳಿಸಿ, ‘ಕನ್ನಡದಲ್ಲಿ ಸಾಕಷ್ಟು ಉತ್ತಮ ಕಂಟೆಂಟ್‌ನ ಚಿತ್ರಗಳು ಬರುತ್ತಿದೆ. ಆ ಸಾಲಿಗೆ ಈ ಚಿತ್ರವೂ ಸೇರಲಿದೆ ಎನ್ನುವುದು ಟ್ರೇಲರ್‌ ನೋಡಿದಾಗ ಅನಿಸಿತು’ ಎಂದು ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಸದ್ಯ ಕಿರುತೆರೆಯಲ್ಲಿ ಬ್ಯುಸಿಯಾಗಿರುವ ನಟ ಅಭಿಜಿತ್‌ ಈ ಚಿತ್ರದ ವಿಶೇಷ ಪಾತ್ರದೊಂದಿಗೆ ಬೆಳ್ಳಿತೆರೆಗೆ ಮರಳುತ್ತಿದ್ದಾರೆ. ಮತ್ತೊಂದು ಪ್ರಮುಖ ಪಾತ್ರದಲ್ಲಿರುವ ನಾಗರಾಜ್‌, ‘ನಾನು ಕನಕಪುರದ ಹತ್ತಿರದ ಹಳ್ಳಿಯೊಂದರ ಬಡ ಕುಟುಂಬದಿಂದ ಬಂದವನು. ಸಿನಿಮಾದಲ್ಲಿ ನಟಿಸುವುದು ನನ್ನ ಆಸೆಯಾಗಿತ್ತು. ಅದು ಈಗ ನನಸಾಗಿದೆ’ ಎನ್ನುತ್ತಾರೆ. ನಿರ್ಮಾಪಕಿ ಉಮಾ ಅವರು ಚಿತ್ರ ಚೆನ್ನಾಗಿ ಮೂಡಿಬರಲು ಸಹಕರಿಸಿದ ತಂತ್ರಜ್ಞರು ಹಾಗೂ ಕಲಾವಿದರೆಲ್ಲರಿಗೂ ಧನ್ಯವಾದ ಹೇಳಿದರು. ಶಾಂತಿ ಮತ್ತು ಮಂಜುಳ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯದಲ್ಲೇ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡುವುದಾಗಿ ನಿರ್ಮಾಪಕರು ಹೇಳುತ್ತಾರೆ.

LEAVE A REPLY

Connect with

Please enter your comment!
Please enter your name here