ಎಂ ಶಶಿಧರ್‌ ನಿರ್ದೇಶನದಲ್ಲಿ ರಾಧಿಕಾ ಕುಮಾರಸ್ವಾಮಿ ನಟಿಸುತ್ತಿರುವ ‘ಅಜಾಗ್ರತ’ ಸಿನಿಮಾ ನೂರು ದಿನಗಳ ಚಿತ್ರೀಕರಣ ಪೂರ್ನಗೊಳಿಸಿದೆ. ಬಾಲಿವುಡ್‌ ನಟ ಶ್ರೇಯಸ್‌ ತಲ್ಪಾಡೆ ಹೀರೋ ಆಗಿ ನಟಿಸುತ್ತಿರುವ ಈ ಸಿನಿಮಾದ ಪ್ರಮುಖ ಪಾತ್ರವೊಂದರಲ್ಲಿ ತಮಿಳು ನಟ ಬಾಬ್ಬಿ ಸಿಂಹ ಕಾಣಿಸಿಕೊಳ್ಳುತ್ತಿದ್ದಾರೆ.

ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ನಟಿಸುತ್ತಿರುವ ‘ಅಜಾಗ್ರತ’ ಚಿತ್ರವು ನೂರು ದಿನಗಳ ಚಿತ್ರೀಕರಣ ಪೂರ್ಣಗೊಳಿಸಿದೆ. ಎಂ ಶಶಿಧರ್ ನಿರ್ದೇಶನದ ಸಿನಿಮಾವನ್ನು ಬೆಂಗಳೂರು, ಹೈದರಾಬಾದ್ ಹಾಗೂ ಮುಂಬೈನಲ್ಲಿ ಚಿತ್ರೀಕರಿಸಲಾಗಿದೆ. ಒಂದು ಹಾಡು ಮತ್ತು ಕೆಲವು ಸನ್ನಿವೇಶಗಳಷ್ಟು ಮಾತಿನ ಭಾಗದ ಚಿತ್ರೀಕರಣ ಬಾಕಿ ಇದ್ದು, ಈ ತಿಂಗಳ ಕೊನೆಗೆ ಕೊನೆಯ ಹಂತದ ಚಿತ್ರೀಕರಣ ಆರಂಭವಾಗಲಿದೆ. ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದಲ್ಲಿ ತಮಿಳು ನಟ ಬಾಬ್ಬಿ ಸಿಂಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಚಿತ್ರದ ಇತರೆ ಪ್ರಮುಖ ಕಲಾವಿದರು. ಕನ್ನಡ, ತೆಲುಗು ಸೇರಿದಂತೆ ಏಳು ಭಾಷೆಗಳಲ್ಲಿ ಸಿನಿಮಾ ತಯಾರಾಗುತ್ತಿದೆ ಎನ್ನುವುದು ವಿಶೇಷ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ, ರವಿವರ್ಮ ಸಾಹಸ ನಿರ್ದೇಶನ ಚಿತ್ರಕ್ಕಿದೆ.

LEAVE A REPLY

Connect with

Please enter your comment!
Please enter your name here