ಕೃಷ್ಣಜನ್ಮಾಷ್ಟಮಿಯ ಅಂಗವಾಗಿ ನಟಿ ಅಮೂಲ್ಯ ತಮ್ಮ ಅವಳಿ ಮಕ್ಕಳಿಗೆ ಕೃಷ್ಣನ ವೇಷ ತೊಡಿಸಿದ್ದಾರೆ. ಚಿತ್ರನಿರ್ದೇಶಕ ರಿಷಭ್‌ ಶೆಟ್ಟಿ ಮತ್ತು ಪ್ರಗತಿ ದಂಪತಿ ಕೂಡ ಮಕ್ಕಳಿಗೆ ಕೃಷ್ಣ, ರಾಧೆಯ ವೇಷ ತೊಡಿಸಿ ಸಂಭ್ರಮಿಸಿದ್ದಾರೆ. ಈ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ಓಡಾಡುತ್ತಿವೆ.

ಕೃಷ್ಣಜನ್ಮಾಷ್ಟಮಿ ಎಂದರೆ ಪುಟಾಣಿ ಮಕ್ಕಳ ಪೋಷಕರಿಗೆ ಒಂದು ರೀತಿಯ ಸಡಗರ. ತಮ್ಮ ಪುಟ್ಟ ಮಕ್ಕಳಿಗೆ ಕೃಷ್ಣ – ರಾಧೆಯ ವೇಷ ತೊಡಿಸಿ ಫೋಟೊಗಳನ್ನು ಕ್ಲಿಕ್ಕಿಸುತ್ತಾರೆ. ಸಿನಿಮಾ ಸೆಲೆಬ್ರಿಟಿಗಳು ತಮ್ಮ ಮಕ್ಕಳನ್ನು ಸಿಂಗರಿಸಿ ಫೋಟೊಶೂಟ್‌ ಮಾಡಿಸಿ ಸೋಷಿಯಲ್‌ ಮೀಡಿಯಾದಲ್ಲಿ ಹಾಕಿದರೆ ಅವರ ಅಭಿಮಾನಿಗಳಿಗೂ ಖುಷಿ. ನಟಿ ಅಮೂಲ್ಯ ತಮ್ಮ ಅವಳಿ ಮಕ್ಕಳಾದ ಅಥರ್ವ್‌, ಅಧವ್‌ರಿಗೆ ಕೃಷ್ಣನ ವೇಷ ಹಾಕಿ ವಿವಿಧ ರೀತಿಯ ಫೋಟೊಶೂಟ್‌ ಮಾಡಿಸಿದ್ದಾರೆ. ಚಿತ್ರನಿರ್ದೇಶಕ ರಿಷಭ್‌ ಶೆಟ್ಟಿ ಮತ್ತು ಪ್ರಗತಿ ದಂಪತಿ ಕೂಡ ತಮ್ಮ ಇಬ್ಬರು ಮಕ್ಕಳಿಗೆ ರಾಧೆ – ಕೃಷ್ಣರ ವೇಷ ತೊಡಿಸಿ ಚೆಂದದ ಫೋಟೊಶೂಟ್‌ ಮಾಡಿಸಿದ್ದಾರೆ. ಈ ಪುಟಾಣಿಗಳ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ.

LEAVE A REPLY

Connect with

Please enter your comment!
Please enter your name here