ಶಂಕರ್‌ ಆರಾಧ್ಯ ನಿರ್ದೇಶನದಲ್ಲಿ ಅನೀಶ್‌ ನಟಿಸಿರುವ ‘ಮಾಯಾನಗರಿ’ ಸಿನಿಮಾ ಸದ್ದಿಲ್ಲದೆ ಸಿದ್ಧವಾಗಿದೆ. ಇಲ್ಲಿ ಅನೀಶ್‌ ಚಿತ್ರನಿರ್ದೇಶನದ ಪಾತ್ರ ನಿರ್ವಹಿಸಿದ್ದಾರೆ. ಶ್ರಾವ್ಯ ರಾವ್ ಮತ್ತು ತೇಜು ಚಿತ್ರದ ಇಬ್ಬರು ನಾಯಕಿಯರು.

ಅನೀಶ್ ಹೀರೋ ಆಗಿ ನಟಿಸಿರುವ ‘ಮಾಯಾನಗರಿ’ ಸಿನಿಮಾ ಬಿಡುಗಡೆಗೆ ಅಣಿಯಾಗಿದೆ. ಈಗಾಗಲೇ ಸೆನ್ಸಾರ್ ಪ್ರಕ್ರಿಯೆ ಮುಗಿಸಿರುವ ಚಿತ್ರತಂಡ, ಯು/ಎ ಅರ್ಹತಾ ಪತ್ರ ಪಡೆದುಕೊಂಡಿದೆ. ಶಂಕರ್‌ ಆರಾಧ್ಯ ನಿರ್ದೇಶನದ ಚಿತ್ರವಿದು. ಇಲ್ಲಿ ಅನೀಶ್‌, ಸಿನಿಮಾ ನಿರ್ದೇಶನದ ಕನಸು ಹೊತ್ತು ಬರುವ ಯುವ ಪ್ರತಿಭೆಯ ಪಾತ್ರದಲ್ಲಿದ್ದಾರೆ. ಕಾಮಿಡಿ, ಲವ್, ಆಕ್ಷನ್, ಸೆಂಟಿಮೆಂಟ್ ಕಥಾಹಂದರವಿರುವ ಈ ಚಿತ್ರದಲ್ಲಿ ಮತ್ತೊಂದು ವಿಶೇಷತೆ ಇದೆ. ಅದನ್ನು ಟ್ರೇಲರ್ ಬಿಡುಗಡೆ ವೇಳೆ ಅನಾವರಣ ಮಾಡುವ ಯೋಜನೆ ನಿರ್ದೇಶಕರದ್ದು. ಚಿತ್ರದ ವಿಶೇಷತೆಗಳನ್ನು ಹಂತಹಂತವಾಗಿ ಪರಿಚಯಸುವುದಾಗಿ ಹೇಳುತ್ತಾರೆ ನಿರ್ದೇಶಕರು.

ಕತೆ, ಚಿತ್ರಕಥೆ ಜೊತೆ ನಿರ್ಮಾಣದ ಜವಾಬ್ದಾರಿಯನ್ನೂ ಶಂಕರ್‌ ಆರಾಧ್ಯ ವಹಿಸಿಕೊಂಡಿದ್ದಾರೆ. ಸ್ಯಾಂಡಲ್‌ವುಡ್‌ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಿದೆ. ಶ್ವೇತಾ ಶಂಕರ್ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ತಾಂತ್ರಿಕವಾಗಿಯೂ ಚಿತ್ರ ಅದ್ಧೂರಿಯಾಗಿ ಮೂಡಿ ಬಂದಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಿಕ್ರಮ್ ಮೋರ್ ಈ ಚಿತ್ರದಲ್ಲಿ ವಿಭಿನ್ನವಾಗಿ ಫೈಟ್ ಕಂಪೋಸ್ ಮಾಡಿದ್ದಾರೆ. ಮದನ್ – ಹರಿಣಿ ಹಾಗೂ ಮುರಳಿ ನೃತ್ಯ ನಿರ್ದೇಶನ, ವಿಜಯ್ ಎಂ ಕುಮಾರ್ ಸಂಕಲನ, ಶ್ರೀನಿವಾಸ್ ಕ್ಯಾಮೆರಾ ಕೈಚಳಕ ಚಿತ್ರಕ್ಕಿದೆ. ಅನೀಶ್ ಜೋಡಿಯಾಗಿ ಶ್ರಾವ್ಯ ರಾವ್ ಮತ್ತು ತೇಜು ನಟಿಸಿದ್ದಾರೆ. ಹಿರಿಯ ನಟ – ನಿರ್ದೇಶಕ ದ್ವಾರಕೀಶ್, ಶರತ್ ಲೋಹಿತಾಶ್ವ, ಅವಿನಾಶ್, ಸುಚೇಂದ್ರ ಪ್ರಸಾದ್, ಚಿಕ್ಕಣ್ಣ, ನಿಹಾರಿಕಾ ಪ್ರಮುಖ ಪಾತ್ರಗಳಲ್ಲಿದ್ದಾರೆ.

LEAVE A REPLY

Connect with

Please enter your comment!
Please enter your name here