ಆರ್ಯನ್‌ ನಟಿಸಿ, ನಿರ್ಮಿಸಿ, ನಿರ್ದೇಶಿಸಿರುವ ‘ಕಚೋರಿ’ ಸಿನಿಮಾ ತೆರೆಗೆ ಸಿದ್ಧವಾಗಿದೆ. ಈ ಪ್ರೇಮಕತೆಯ ಸಿನಿಮಾದ ನಾಯಕಿ ಇಳಾ ವಿಟ್ಲ. ಹಿರಿಯ ನಟ ಕೀರ್ತಿರಾಜ್‌ ಡಾನ್‌ ಪಾತ್ರದಲ್ಲಿ ನಟಿಸಿದ್ದು, ಅವರ ಪುತ್ರ ಧರ್ಮ ಕೀರ್ತಿರಾಜ್‌ ಅತಿಥಿ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಕಚೋರಿ ಎಲ್ಲರೂ ಇಷ್ಟಪಡುವಂಥ ರುಚಿಕರವಾದ ಖಾದ್ಯ. ಈಗ ಇದೇ ಹೆಸರಿನಲ್ಲಿ ಚಿತ್ರವೊಂದು ನಿರ್ಮಾಣವಾಗಿದ್ದು, ತೆರೆಗೆ ಸಿದ್ದವಾಗಿದೆ. ಸಿನಿವೇ ಸಿನಿ ಕ್ರಿಯೇಶನ್ಸ್ ಮೂಲಕ ಈ ಚಿತ್ರವನ್ನು ಆರ್ಯನ್ ಅವರು ನಿರ್ಮಾಣ ಮಾಡುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ಆರ್ಯನ್ ಚಿತ್ರದ ನಾಯಕನೂ ಆಗಿದ್ದು, ಇಳಾ ವಿಟ್ಲ ನಾಯಕಿ‌ ಪಾತ್ರ ನಿರ್ವಹಿಸಿದ್ದಾರೆ. ಹಿರಿಯ ನಟ ಕೀರ್ತಿರಾಜ್ ಡಾನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕೃಪಾಕರ್ ಅವರ ಸಂಗೀತ ಸಂಯೋಜನೆ ಚಿತ್ರಕ್ಕಿದೆ.

ಚಿತ್ರದ ನಾಯಕ, ನಿರ್ದೇಶಕ, ನಿರ್ಮಾಪಕ ಆರ್ಯನ್‌, ‘ನಾನು ಸಿನಿವೇ ಸಿನಿ ಆಕ್ಟಿಂಗ್ ಕ್ಲಾಸಸ್ ನಡೆಸುತ್ತಿದ್ದೇನೆ. ಕೋವಿಡ್ ಸಮಯದಲ್ಲಿ ಆರಂಭಿಸಿದ್ದ ಚಿತ್ರವಿದು. ನಾಯಕ ಕಚೋರಿ ಮಾರುವ ಹುಡುಗ. ಆತ ಶ್ರೀಮಂತ ಹುಡುಗಿಯನ್ನು ಲವ್ ಮಾಡುತ್ತಾನೆ. ನಂತರ ಬ್ರೇಕಪ್ ಆಗುತ್ತೆ, ಏಕೆ ಬ್ರೇಕಪ್ ಆಯ್ತು, ಅದಕ್ಕೆ ಕಾರಣ ಏನು ? ಎಂದು ಹುಡುಕುವುದೇ ಚಿತ್ರದ ಎಳೆ. ಗಂಗಾವತಿ ಸುತ್ತಮುತ್ತ ಟಾಕೀ ಪೋರ್ಷನ್ ಮುಗಿಸಿ, ವಿಜಯ ಪ್ರಕಾಶ್ ಹಾಡಿದ ಡ್ಯುಯೆಟ್ ಸಾಂಗನ್ನು ಮನಾಲಿಯಲ್ಲಿ ಶೂಟ್ ಮಾಡಿದ್ದೇವೆ. ಕೆಂಪೇಗೌಡ, ಮೋಹನ್ ಜುನೇಜಾ ಕಾಮಿಡಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಡೀ ಫ್ಯಾಮಿಲಿ ಕೂತು ನೋಡುವಂಥ ಚಿತ್ರವಿದು’ ಎನ್ನುತ್ತಾರೆ.

‘ಚಿತ್ರದಲ್ಲಿ ನಾನು ಡಾನ್ ಆಗಿ ನಟಿಸಿದ್ದು, ಜೀವನದಲ್ಲಿ ನೊಂದ ನಾಯಕ, ನನ್ನ ಆಶ್ರಯಕ್ಕೆ ಬಂದು ಅಲ್ಲಿ ಹೇಗೆ ಬೆಳೆಯುತ್ತಾನೆಂಬುದೇ ಕತೆ. ಆರ್ಯನ್, ಇಳಾ ವಿಟ್ಲ ಇಬ್ಬರೂ ನನ್ನನ್ನು ತಂದೆ ಥರ ನೋಡಿಕೊಂಡರು. ಆರ್ಯನ್ ಮೊದಲ ಚಿತ್ರವಾದರೂ ಹತ್ತಾರು ಸಿನಿಮಾ ಮಾಡಿದವರಂತೆ ಕೆಲಸ ಮಾಡಿದ್ದಾರೆ’ ಎನ್ನುವುದು ನಟ ಕೀರ್ತಿರಾಜ್‌ ಮಾತು. ಸಂಗೀತ ನಿರ್ದೇಶಕ ಕೃಪಾಕರ್ ಸಿನಿಮಾದ ಸಂಗೀತದ ಬಗ್ಗೆ ಮಾತನಾಡುತ್ತಾ, ‘ಚಿತ್ರದಲ್ಲಿ 2 ಡ್ಯುಯೆಡ್, ಐಟಂ, ಟೀಸಿಂಗ್, ಫೀಲಿಂಗ್ ಸೇರಿ 5 ವೆರೈಟಿ ಹಾಡುಗಳಿವೆ. ಹೊಸ ಪ್ರತಿಭೆ ಪ್ರತಾಪ್‌ರೆಡ್ಡಿ ಅವರಿಂದ ಹಾಡೊಂದನ್ನು ಬರೆಸಿದ್ದೇನೆ’ ಎನ್ನುತ್ತಾರೆ. ನಟಿ ಇಳಾ ವಿಟ್ಲ ಅವರಿಗೆ ಇದು ಮೂರನೇ ಸನಿಮಾ. ಕಾಲೇಜ್ ಯುವತಿಯಾಗಿ, ನಂತರ ರಾಜಕಾರಣಿಯಾಗಿ ಅವರ ಪಾತ್ರಕ್ಕೆ ಎರಡು ಭಿನ್ನ ಶೇಡ್‌ಗಳಿವೆ. ನಟ ಕೆಂಪೇಗೌಡ ಚಿತ್ರದಲ್ಲಿ ಹೀರೋ ಸ್ನೇಹಿತನ ಪಾತ್ರ ನಿರ್ವಹಿಸಿದ್ದಾರೆ. ಪ್ರತಾಪ್‌ ರೆಡ್ಡಿ ಚಿತ್ರದ ಎಲ್ಲಾ ಗೀತೆಗಳನ್ನು ರಚಿಸಿದ್ದಾರೆ. ಖಾಜಾಹುಲಿ, ಮಂಜುನಾತ್‌ ಚಿತ್ರದ ಇತರೆ ಪ್ರಮುಖ ಪಾತ್ರಧಾರಿಗಳು.

LEAVE A REPLY

Connect with

Please enter your comment!
Please enter your name here