ಬಿಗ್‌ಬಾಸ್‌ ಕನ್ನಡ ಹತ್ತನೇ ಸೀಸನ್‌ ಫಿನಾಲೆ ಹಬ್ಬ ಶುರುವಾಗಿ ಆಗಿದೆ. ಸ್ಪರ್ಧಿಗಳಲ್ಲಿ ವೇದಿಕೆಯ ಕುರಿತು ಕೃತಜ್ಞತೆಯ ಭಾವ ತುಂಬಿದೆ. ಫಿನಾಲೆ ಇಂದು ಮತ್ತು ನಾಳೆ ಸಂಜೆ 7.30ರಿಂದ ಮೂಡಿಬರುತ್ತಿದೆ.

ಬಿಗ್‌ಬಾಸ್‌ ಕನ್ನಡ ಹತ್ತನೇ ಸೀಸನ್‌ ಫಿನಾಲೆ ಹಬ್ಬ ಶುರುವಾಗಿ ಆಗಿದೆ. ಅದ್ಧೂರಿ ವೇದಿಕೆಯಲ್ಲಿ ಸುದೀಪ್ ಭರ್ಜರಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಫೈನಲಿಸ್ಟ್ ಆಗಿರುವ ಆರು ಜನ ಸ್ಪರ್ಧಿಗಳನ್ನು, ಅವರ ಮನೆಯವರನ್ನು ಮಾತಾಡಿಸಿದ್ದಾರೆ. ಈ ಕಲರ್‌ಫುಲ್‌ ವೇದಿಕೆಯ ತುಣುಕು ಜಿಯೊ ಸಿನಿಮಾ ಬಿಡುಗಡೆ ಮಾಡಿರುವ ಪ್ರೋಮೊದಲ್ಲಿದೆ. ‘ಈ ಹತ್ತು ಸೀಸನ್‌ಗಳಲ್ಲಿ ಇಷ್ಟು ಸುದ್ದಿ ಮಾಡಿದ ಸೀಸನ್‌ ಬೇರೆ ಇಲ್ಲ’ ಎಂದು ಸ್ವತಃ ಕಿಚ್ಚ ಸುದೀಪ್ ಅವರು ಹೇಳಿದ್ದಾರೆ.

ವರ್ತೂರು ಸಂತೋಷ್ ಅವರು ಜೈಲಿಗೆ ಹೋಗಿದ್ದ ಸಂಗತಿಯನ್ನು ಸುದೀಪ್‌ ರಿವೀಲ್ ಮಾಡುತ್ತಿದ್ದ ಹಾಗೆಯೇ ಮನೆಯೊಳಗಿನ ಉಳಿದ ಸ್ಪರ್ಧಿಗಳ ಮುಖದಲ್ಲಿ ಅಚ್ಚರಿ ಮೂಡಿದರೆ, ವರ್ತೂರು ಅವರ ಕಣ್ಣುಗಳಲ್ಲಿ ನೀರು ತುಂಬಿತ್ತು. ಹೊರಗೆ ಕೂತಿದ್ದ ವರ್ತೂರು ಸಂತೋಷ್ ಅಮ್ಮನೂ ಸೆರಗಿನಲ್ಲಿ ಕಣ್ಣೀರು ಒರೆಸಿಕೊಂಡರು. ಡ್ರೋನ್‌ ಪ್ರತಾಪ್ ತಾಯಿ, ‘ನಮ್ಮ ಮಗನನ್ನು ನಮಗೆ ಕೊಟ್ಟಿದ್ದೀರಾ. ಈ ವೇದಿಕೆಗೆ ಚಿರಋಣಿ’ ಎಂದು ಭಾವುಕರಾಗಿದ್ದಾರೆ. ಎಲ್ಲರ ಮುಖದಲ್ಲಿಯೂ ಬಿಗ್‌ಬಾಸ್ ವೇದಿಕೆಯ ಕುರಿತು ಕೃತಜ್ಞತೆಯ ಭಾವ ತುಂಬಿದೆ. ಬಿಗ್‌ಬಾಸ್‌ ಕನ್ನಡ ಸೀಸನ್‌ 10 ಫಿನಾಲೆ ಇಂದು ಮತ್ತು ನಾಳೆ ಜಿಯೋ ಸಿನಿಮಾದಲ್ಲಿ ಸಂಜೆ 7.30ರಿಂದ ಪ್ರಸಾರವಾಗಲಿದೆ. ಕಲರ್ಸ್‌ ಕನ್ನಡದಲ್ಲಿಯೂ ಅದೇ ಸಮಯದಲ್ಲಿ ಫಿನಾಲೆ ವೀಕ್ಷಿಸಬಹುದು.

LEAVE A REPLY

Connect with

Please enter your comment!
Please enter your name here