ಅನಿರುದ್ಧ್‌, ನಿಧಿ ಸುಬ್ಬಯ್ಯ, ರಚೆಲ್‌ ಡೇವಿಡ್‌ ಮುಖ್ಯಭೂಮಿಕೆಯ ‘Chef ಚಿದಂಬರ’ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ. ಆನಂದರಾಜ್‌ ನಿರ್ದೇಶನದ ಇದು ಡಾರ್ಕ್‌ ಹ್ಯೂಮರ್‌ ಜಾನರ್‌ ಸಿನಿಮಾ. ಗಣೇಶ್‌ ಪರಶುರಾಮ್‌ ಚಿತ್ರಕಥೆ ಮತ್ತು ಸಂಭಾಷಣೆ ರಚಿಸಿದ್ದಾರೆ.

‘ನಮ್ಮ ಚಿತ್ರದ ಚಿತ್ರೀಕರಣ ಆಗಸ್ಟ್ 10ರಂದು ಆರಂಭವಾಗಿತ್ತು. ಅಕ್ಟೋಬರ್ 10ರಂದು ಮುಕ್ತಾಯವಾಗಿದೆ. ಚಿತ್ರಕ್ಕೆ ಒಟ್ಟು 29 ದಿನಗಳ ಕಾಲ ಬೆಂಗಳೂರು, ಮಂಗಳೂರು, ತುಮಕೂರು, ದೇವರಾಯನದುರ್ಗ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಇದೊಂದು ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಡಾರ್ಕ್ ಹ್ಯೂಮರ್ ಜಾನರ್ ನ ಚಿತ್ರ’ ಎಂದರು ‘Chef ಚಿದಂಬರ’ ಸಿನಿಮಾದ ನಿರ್ದೇಶಕ ಆನಂದರಾಜ್‌. ಚಿತ್ರದಲ್ಲಿ ಅನಿರುದ್ಧ್‌ ಶೇಫ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಿಧಿ ಸುಬ್ಬಯ್ಯ ಮತ್ತು ರಚೆಲ್‌ ಡೇವಿಡ್‌ ಚಿತ್ರದ ಇಬ್ಬರು ನಾಯಕಿಯರು. ತಮ್ಮ ಪಾತ್ರದ ಬಗ್ಗೆ ಮಾತನಾಡುವ ಅನಿರುದ್ಧ್‌, ‘ನಾನು ಯಾವತ್ತಿಗೂ ಅಡುಗೆಮನೆ ಕಡೆ ಹೋದವನಲ್ಲ. ಚಿತ್ರದಲ್ಲಿ ಮೊದಲ ಬಾರಿಗೆ ಶೆಫ್ ಪಾತ್ರ ನಿರ್ವಹಿಸಿದ್ದೇನೆ. ತರಬೇತಿ ಪಡೆದು ಈ ಪಾತ್ರ ನಿರ್ವಹಣೆ ಮಾಡಿದ್ದೇನೆ. ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಾದರೂ, ನಿರ್ದೇಶಕರು ಕಥೆಯನ್ನು ಹಾಸ್ಯದ ಮೂಲಕ ಹೇಳಿದ್ದಾರೆ’ ಎನ್ನುತ್ತಾರೆ.

‘ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಈ ಪಾತ್ರ ಎಲ್ಲರಿಗೂ ಮೆಚ್ಚುಗೆಯಾಗಲಿದೆ’ ಎನ್ನುವುದು ಚಿತ್ರದ ನಾಯಕಿ ನಿಧಿ ಸುಬ್ಬಯ್ಯ ಮಾತು. ಮತ್ತೊಬ್ಬ ನಾಯಕಿ ರಚೆಲ್‌ ಡೇವಿಡ್‌ ಚಿತ್ರದಲ್ಲಿ ‘ಅನು’ ಪಾತ್ರ ನಿರ್ವಹಿಸಿದ್ದಾರೆ. ಶರತ್ ಲೋಹಿತಾಶ್ವ, ಶಿವಮಣಿ, ಶ್ರೀಧರ್, ಮಾಹಂತೇಶ್ ಚಿತ್ರದ ಇತರೆ ಪ್ರಮುಖ ಕಲಾವಿದರು. ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ ಎನ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ನಿರ್ದೇಶಕರೆ ಕತೆ ರಚಿಸಿದ್ದು, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಗಣೇಶ್ ಪರಶುರಾಮ್ ಬರೆದಿದ್ದಾರೆ. ಉದಯಲೀಲಾ ಛಾಯಾಗ್ರಹಣ, ವಿಜೇತ್ ಚಂದ್ರ ಸಂಕಲನ, ರಿತ್ವಿಕ್ ಮುರಳೀಧರ್ ಸಂಗೀತ ನಿರ್ದೇಶನ, ಆಶಿಕ್ ಹುಸಗುಳ್ಳಿ ಡಿಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ, ಮಾಧುರಿ ಪರಶುರಾಮ ನೃತ್ಯ ನಿರ್ದೇಶನ ಚಿತ್ರಕ್ಕಿದೆ. ಸಿನಿಮಾದ ಶೂಟಿಂಗ್‌ ಪೂರ್ಣವಾಗಿದ್ದು ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಿಗೆ ಚಾಲನೆ ಸಿಕ್ಕಿದೆ.

LEAVE A REPLY

Connect with

Please enter your comment!
Please enter your name here