ದಸರಾ ಸಂದರ್ಭದಲ್ಲಿ ದರ್ಶನ್‌ರ ‘ಕಾಟೇರ’ ಸಿನಿಮಾದ ನೂತನ ಪೋಸ್ಟರ್‌ ಬಿಡುಗಡೆಯಾಗಿದೆ. ಪೋಸ್ಟರ್‌ನಲ್ಲಿ ಮಾಸ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ ದರ್ಶನ್‌. ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ ಚಿತ್ರವನ್ನು ತರುಣ್‌ ಸುಧೀರ್‌ ನಿರ್ದೇಶಿಸುತ್ತಿದ್ದಾರೆ. ಮಾಲಾಶ್ರೀ ಪುತ್ರಿ ಆರಾಧನಾ ಈ ಚಿತ್ರದ ನಾಯಕಿ.

ದರ್ಶನ್‌ ತೂಗುದೀಪ ಅಭಿನಯದ ‘ಕಾಟೇರ’ ಸಿನಿಮಾದ ನೂತನ ಪೋಸ್ಟರ್‌ ಬಿಡುಗಡೆಯಾಗಿದೆ. ಪೋಸ್ಟರ್‌ನಲ್ಲಿ ದರ್ಶನ್‌ ಅವರು ಚಾಮುಂಡೇಶ್ವರಿ ದೇವಿಯ ಮುಂದೆ ನೆಲಕ್ಕೆ ಮಂಡಿಯೂರಿ ಶತ್ರುಗಳ ವಿರುದ್ಧ ಹೋರಾಟಕ್ಕೆ ಸಿದ್ಧವಾಗಿರುವಂತಹ ಮಾಸ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ‘ಒಳ್ಳೆಯದು ಯಾವಾಗಲೂ ಕೆಟ್ಟದ್ದನ್ನು ಗೆಲ್ಲುತ್ತದೆ ಎಂದು ನಾಡಹಬ್ಬ ದಸರಾ ನಮಗೆ ಸೂಚಿಸುತ್ತದೆ. ತಾಯಿ ಚಾಮುಂಡೇಶ್ವರಿ ನಿಮಗೂ ಮತ್ತು ನಿಮ್ಮ ಪ್ರೀತಿಪಾತ್ರರಿಗೂ ಆರೋಗ್ಯ, ಸುಖ ಸಂಪತ್ತು ನೀಡಲೆಂದು ಬಯಸುತ್ತಾ ಆಯುಧ ಪೂಜೆ ಹಾಗೂ ವಿಜಯದಶಮಿಯ ಹಾರ್ದಿಕ ಶುಭಾಶಯಗಳು’ ಎಂದು ದರ್ಶನ್‌ ಚಿತ್ರದ ಫೊಸ್ಟರ್ ಹಂಚಿಕೊಂಡಿದ್ದಾರೆ.‌ ಚಿತ್ರತಂಡವು ಗಣೇಶ ಚತುರ್ಥಿ ಹಬ್ಬದ ಸಮಯದಲ್ಲಿ ಶ್ರುತಿ ಅವರ ಲುಕ್‌ ಬಿಡುಗಡೆ ಮಾಡಿತ್ತು. ಯುಗಾದಿ ಹಬ್ಬದ
ಸಮಯದಲ್ಲಿ ಚಿತ್ರದ ನಾಯಕನಟಿ ಆರಾಧನಾ ರಾಮ್ ಅವರ ಫೋಸ್ಟರ್ ಬಿಡುಗಡೆ ಮಾಡಿತ್ತು. ಈಗ ಆಯುಧಪೂಜೆ ಮತ್ತು ವಿಜಯದಶಮಿ ಸಮಯದಲ್ಲಿ ದರ್ಶನ್‌ ಅವರ ಪೋಸ್ಟರ್‌ ಬಿಡುಗಡೆ ಮಾಡಿ ಹಬ್ಬದ ಶುಭಾಶಯ ಕೋರಿದೆ.

Rockline Entertainments ಬ್ಯಾನರ್‌ ಅಡಿ ರಾಕ್‌ಲೈನ್‌ ವೆಂಕಟೇಶ್‌ ಈ ಚಿತ್ರ ನಿರ್ಮಿಸುತ್ತಿದ್ದು, ತರುಣ್‌ ಸುಧೀರ್‌ ನಿರ್ದೇಶಿಸುತ್ತಿದ್ದಾರೆ. ತರುಣ್‌ ಸುಧೀರ್‌ ನಿರ್ದೇಶನದ ‘ಚೌಕ’ ಚಿತ್ರದಲ್ಲಿ ದರ್ಶನ್‌ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ನಂತರ ‘ರಾಬರ್ಟ್‌’ ಸಿನಿಮಾವನ್ನು ಅವರೇ ನಿರ್ದೇಶಿಸಿದ್ದರು. ಈಗ ‘ಕಾಟೇರ’ ಚಿತ್ರದ ಮೂಲಕ ದರ್ಶನ್‌ ಹಾಗೂ ತರುಣ್‌ ಸುಧೀರ್‌ ಮತ್ತೆ ಒಂದಾಗುತ್ತಿದ್ದಾರೆ. ಚಿತ್ರದಲ್ಲಿ ದರ್ಶನ್‌ಗೆ ನಾಯಕಿಯಾಗಿ ಮಾಲಾಶ್ರೀ ಪುತ್ರಿ ಆರಾಧನಾ ರಾಮ್‌ ನಟಿಸಿದ್ದಾರೆ. ಈ ಚಿತ್ರ 1970ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದ್ದು, ಕನಕಪುರ ರಸ್ತೆಯಲ್ಲಿ ಅದ್ದೂರಿಯಾಗಿ ಹಳ್ಳಿ ಸೆಟ್ ಹಾಕಲಾಗಿದೆ‌ ಎಂದು ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಮಾಹಿತಿ ನೀಡಿದ್ದರು. ಮಾಸ್ತಿ ಸಂಭಾಷಣೆ, ವಿ ಹರಿಕೃಷ್ಣ ಸಂಗೀತ ಸಂಯೋಜನೆ, ಸುಧಾಕರ್ ಛಾಯಾಗ್ರಹಣ ಚಿತ್ರಕ್ಕಿದೆ.

LEAVE A REPLY

Connect with

Please enter your comment!
Please enter your name here