ಸುದೀಪ್‌, ‘ನಿಮ್ಮ ಮನೆಯಿಂದ ಬರುತ್ತಿದ್ದ ಪತ್ರದಲ್ಲಿ ನೀವು ಏನು ನಿರೀಕ್ಷಿಸಿದ್ದಿರಿ?’ ಎಂದು ಪ್ರತಾಪ್ ಅವರನ್ನು ಕೇಳಿದ್ದಾರೆ. ಅದನ್ನು ಹೇಳುವ ಮೊದಲೇ ಮನೆಯೊಳಗೆ ಪ್ರತಾಪ್ ತಂದೆಯ ಧ್ವನಿ ಮೊಳಗಿದೆ. ಫೋನ್‌ನಲ್ಲಿ ತಂದೆಯ ಧ್ವನಿಯನ್ನು ಕೇಳಿದ ಪ್ರತಾಪ್, ‘ಅಪ್ಪಾ ನನ್ನ ಕ್ಷಮಿಸಿಬಿಡಿ. ನಿಮಗೆ ಸಾಕಷ್ಟು ನೋವು ಕೊಟ್ಟಿದ್ದೀನಿ’ ಎಂದು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿ ಡ್ರೋನ್‌ ಪ್ರತಾಪ್‌ ಆರಂಭದಲ್ಲಿ ಯಾರೊಂದಿಗೂ ಬರೆಯುತ್ತಿರಲಿಲ್ಲ. ಒಬ್ಬೊಬ್ಬರೇ ಇರುತ್ತಿದ್ದ, ಯಾರೊಂದಿಗೂ ಬೆರೆಯದ ಅವರು ನಂತರ ನಿಧಾನಕ್ಕೆ ಬೆರೆಯತೊಡಗಿದ್ದರು. ಆಗ ಅವರು ಸಾಕಷ್ಟು ವಿರೋಧವನ್ನೂ ಎದುರಿಸಬೇಕಾಯ್ತು. ಅದನ್ನು ಎದುರಿಸಿ ಅವರು ನಿಧಾನವಾಗಿ ತಮ್ಮ ಇರುವನ್ನು ಗುರುತಿಸಿಕೊಂಡರು. ಮೊದಲಿನಿಂದಲೂ ಪ್ರತಾಪ್, ತಮ್ಮ ಕುಟುಂಬದವರ ಬಗ್ಗೆ ಮಾತಾಡಿದ್ದು ಕಡಿಮೆಯೇ. ಆದರೆ ಅವರು ಎಷ್ಟೋ ವರ್ಷಗಳಿಂದ ಕುಟುಂಬದಿಂದ ದೂರವಿದ್ದಾರೆ ಎಂಬುದನ್ನು ಹೇಳಿದ್ದರು. ಅಲ್ಲದೇ ತಂದೆ ತಾಯಿ ಜೊತೆಗೆ ತಂಗಿಯ ಜೊತೆಗೆ ಮಾತಾಡಬೇಕು ಅನಿಸುತ್ತಿದೆ ಎಂದೂ ಹೇಳಿದ್ದರು.

ಕಳೆದ ವಾರ ಸ್ಪರ್ಧಿಗಳಿಗೆ ತಮ್ಮ ಕುಟುಂಬದವರು ಬರೆದ ಪತ್ರಗಳನ್ನು ಪಡೆದುಕೊಳ್ಳುವ ಅವಕಾಶ ಸಿಕ್ಕಿತ್ತು. ಆದರೆ ಅದರಲ್ಲಿ ಪ್ರತಾಪ್ ವಿಫಲರಾದರು. ಹಾಗಾಗಿ ಅವರು ನಿರಾಶೆಗೊಂಡಿದ್ದರು. ಈಗ ವೀಕೆಂಡ್‌ನ ‘ಕಿಚ್ಚನ ಪಂಚಾಯಿತಿ’ಯಲ್ಲಿ ಸುದೀಪ್, ಪ್ರತಾಪ್‌ಗೆ ಸ್ವೀಟ್ ಸರ್ಪೈಸ್ ಕೊಟ್ಟಿದ್ದಾರೆ. ಈ ಸರ್ಪ್ರೈಸ್‌ ಅಷ್ಟೇ ಭಾವುಕವಾದದ್ದೂ ಆಗಿದೆ. ‘ನಿಮ್ಮ ಮನೆಯಿಂದ ಬರುತ್ತಿದ್ದ ಪತ್ರದಲ್ಲಿ ನೀವು ಏನು ನಿರೀಕ್ಷಿಸಿದ್ದಿರಿ?’ ಎಂದು ಪ್ರತಾಪ್ ಅವರನ್ನು ಕೇಳಿದ್ದಾರೆ. ಅದನ್ನು ಹೇಳುವ ಮೊದಲೇ ಮನೆಯೊಳಗೆ ಪ್ರತಾಪ್ ತಂದೆಯ ಧ್ವನಿ ಮೊಳಗಿದೆ. ಫೋನ್‌ನಲ್ಲಿ ತಂದೆಯ ಧ್ವನಿಯನ್ನು ಕೇಳಿದ ಪ್ರತಾಪ್, ‘ಅಪ್ಪಾ ನನ್ನ ಕ್ಷಮಿಸಿಬಿಡಿ. ನಿಮಗೆ ಸಾಕಷ್ಟು ನೋವು ಕೊಟ್ಟಿದ್ದೀನಿ’ ಎಂದು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇದು JioCinema ಬಿಡುಗಡೆ ಮಾಡಿರುವ ಪ್ರೊಮೊದಲ್ಲಿ ಜಾಹೀರಾಗಿದೆ.

LEAVE A REPLY

Connect with

Please enter your comment!
Please enter your name here