ಕನ್ನಡ ಚಿತ್ರರಂಗದ ಪ್ರಮುಖ ಚಿತ್ರನಿರ್ದೇಶಕರಲ್ಲೊಬ್ಬರಾದ ಎಸ್‌ ನಾರಾಯಣ್‌ ನಿರ್ದೇಶನದ ಸಿನಿಮಾಗೆ ಶೂಟಿಂಗ್‌ ನಡೆದಿದೆ. ಯುವ ನಟ ಶ್ರೇಯಸ್‌ ಮಂಜು ಈಗಾಗಲೇ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದು, ನಟ ದುನಿಯಾ ವಿಜಯ್‌ ಜೂನ್‌ 5ರಂದು ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ.

ಸಾಕಷ್ಟು ಯಶಸ್ವೀ ಸಿನಿಮಾಗಳನ್ನು ನಿರ್ದೇಶಿಸಿರುವ ಎಸ್‌ ನಾರಾಯಣ್‌ ನೂತನ ಸಿನಿಮಾ ಸದ್ದಿಲ್ಲದೆ ಚಿತ್ರೀಕರಣಗೊಳ್ಳುತ್ತಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದುನಿಯಾ ವಿಜಯ್‌ ಮತ್ತು ಶ್ರೇಯಸ್‌ ಮಂಜು ನಟಿಸುತ್ತಿದ್ದಾರೆ ಎನ್ನುವುದು ವಿಶೇಷ. ಚಿಕ್ಕಮಗಳೂರಿನಲ್ಲಿ ಶ್ರೇಯಸ್‌ ಮಂಜು ಹಾಗೂ ಇತರೆ ಕಲಾವಿದರು ಅಭಿನಯಿಸಿರುವ ಮೊದಲ ಹಂತದ ಶೂಟಿಂಗ್‌ ಪೂರ್ಣಗೊಂಡಿದೆ. ಇದೇ ಜೂನ್‌ 5ರಿಂದ ದುನಿಯಾ ವಿಜಯ್‌ ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ. ಕೆ ಮಂಜು ಮತ್ತು ರಮೇಶ್‌ ಯಾದವ್‌ ಜೊತೆಯಾಗಿ ಈಶ ಪ್ರೊಡಕ್ಷನ್ಸ್‌ ಮೂಲಕ ನಿರ್ಮಿಸುತ್ತಿರುವ ಮೊದಲ ಚಿತ್ರವಿದು.

ಅನುಭವಿ ನಿರ್ದೇಶಕ – ನಿರ್ಮಾಪಕರಾದ ಎಸ್ ನಾರಾಯಣ್, ಕೆ ಮಂಜು, ರಮೇಶ್ ಯಾದವ್ ಮತ್ತು ನಟ ದುನಿಯಾ ವಿಜಯ್‌ ಅವರ ಕಾಂಬಿನೇಷನ್‌ನಲ್ಲಿ ತಯಾರಾಗುತ್ತಿರುವ ಚಿತ್ರದ ಬಗ್ಗೆ ನಿರೀಕ್ಷೆಯಿದೆ. ಸದ್ಯದಲ್ಲೇ ಚಿತ್ರದ ಶೀರ್ಷಿಕೆ ಅನಾವರಣಗೊಳಿಸಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ‌. ಬೃಂದಾ ಚಿತ್ರದ ನಾಯಕಿಯಾಗಿ ನಟಿಸುತ್ತಿದ್ದಾರೆ. ಸಾಧುಕೋಕಿಲ, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಕಲ್ಯಾಣಿ, ಗಿರಿ, ಜಯರಾಂ, ಸುಜಯ್ ಶಾಸ್ತ್ರಿ ಇತರೆ ಪ್ರಮುಖ ಕಲಾವಿದರು. ಎಸ್ ನಾರಾಯಣ್ ಅವರು ಚಿತ್ರಕಥೆ, ಸಂಭಾಷಣೆ ಬರೆದು ಗೀತರಚನೆ ಮಾಡಿ ನಿರ್ದೇಶಿಸುತ್ತಿರುವ ಚಿತ್ರಕ್ಕೆ ಜೆ‌ಸ್ಸಿ ಗಿಫ್ಟ್ ಸಂಗೀತ, ಪಿ ಕೆ ಹೆಚ್ ದಾಸ್ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಸಾಹಸ ನಿರ್ದೇಶನವಿದೆ.

LEAVE A REPLY

Connect with

Please enter your comment!
Please enter your name here