ಕನ್ನಡ ಚಿತ್ರರಂಗದ ಯಶಸ್ವೀ ನಾಯಕನಟ ದರ್ಶನ್‌ ಅವರು ಚಿತ್ರರಂಗಕ್ಕೆ ಪರಿಚಯವಾಗಿ 25 ವರ್ಷಗಳಾಗಿವೆ. ನಟನ ಅಭಿಮಾನಿಗಳು ಮತ್ತು ಹಿತೈಷಿಗಳು ಈ ಮೈಲುಗಲ್ಲನ್ನು ಸ್ಮರಣೀಯವಾಗಿಸಲು ಅದ್ಧೂರಿ ಕಾರ್ಯಕ್ರಮ ಆಯೋಜಿಸುತ್ತಿದ್ದಾರೆ. ಫೆಬ್ರವರಿ 17ರಂದು ಶ್ರೀರಂಗಪಟ್ಟಣದಲ್ಲಿ ಕಾರ್ಯಕ್ರಮ ನಡೆಯಲಿದೆ.

ನಟ ದರ್ಶನ್ ಬೆಳ್ಳಿತೆರೆಗೆ ಪರಿಚಯವಾಗಿ 25 ವರ್ಷಗಳು ಕಳೆದಿವೆ. ಈ ಸಂದರ್ಭದಲ್ಲಿ ದರ್ಶನ್ ಅವರ ನೆಚ್ಚಿನ ಸೆಲೆಬ್ರಿಟಿಗಳು (ಅಭಿಮಾನಿಗಳು), ಸ್ನೇಹಿತರು ಹಾಗೂ ಹಿತೈಷಿಗಳು ಅರ್ಥಪೂರ್ಣವಾದ ಸಮಾರಂಭವೊಂದನ್ನು ಆಯೋಜಿಸಿದ್ದಾರೆ. ಆದಿಚುಂಚನಗಿರಿ ಶ್ರೀಗಳು, ಸುತ್ತೂರು ಶ್ರೀಗಳು, ಬೇಬಿಮಠದ ಶ್ರೀಗಳ ಸಾನಿಧ್ಯ, ಸಂಸದೆ – ನಟಿ ಸುಮಲತಾ ಅಂಬರೀಶ್ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಫೆಬ್ರವರಿ 17ರ ಶನಿವಾರ ಸಂಜೆ 5ಕ್ಕೆ ‘ಬೆಳ್ಳಿ ಪರ್ವ D 25’ ಶ್ರೀರಂಗಪಟ್ಟಣದ ರಂಗನಾಥ ದೇವಾಲಯದ ಆವರಣದಲ್ಲಿ ಕಾರ್ಯಕ್ರಮ ಜರುಗಲಿದೆ. ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಈ ಸಮಾರಂಭ ನಡೆಯಲಿದ್ದು, ಕನ್ನಡ ಚಿತ್ರರಂಗದಲ್ಲಿ 25 ವರ್ಷ ಪೂರೈಸಿರುವ ದರ್ಶನ್ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ವಿ ಹರಿಕೃಷ್ಣ ಸಂಗೀತ ಸಂಜೆ ಸೇರಿದಂತೆ ಹಲವು ಮನರಂಜನಾ ಕಾರ್ಯಕ್ರಮಗಳು ಇರಲಿವೆ. ಈ ಸಂಭ್ರಮದಲ್ಲಿ ನಟರಾದ ವಿನೋದ್ ರಾಜ್‌, ವಿನೋದ್ ಪ್ರಭಾಕರ್, ಸತೀಶ್ ನೀನಾಸಂ, ಡಾಲಿ ಧನಂಜಯ್, ಅಭಿಷೇಕ್ ಅಂಬರೀಶ್, ಧನ್ವೀರ್, ಚಿಕ್ಕಣ್ಣ, ಝೈದ್ ಖಾನ್, ಶಿವರಾಜ್ ಕೆ ಆರ್ ಪೇಟೆ, ಸೂರಜ್ ಸೇರಿದಂತೆ ಸಾಕಷ್ಟು ನಟ, ನಟಿಯರು ಅತಿಥಿಗಳಾಗಿ ಆಗಮಿಸಲಿದ್ದಾರೆ. ನಿಮಿಕಾ ರತ್ನಾಕರ್, ನಿಶ್ವಿಕಾ ನಾಯ್ಡು, ಬೃಂದಾ ಆಚಾರ್ಯ, ಶರಣ್ಯ ಶೆಟ್ಟಿ, ನಮ್ರತಾ ಗೌಡ, ತನ್ವಿಯ ಬಾಲರಾಜ್, ಪ್ರಿಯಾಂಕ ಗೌಡ ಸೇರಿದಂತೆ ಹಲವು ತಾರೆಯರು ನೃತ್ಯ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

LEAVE A REPLY

Connect with

Please enter your comment!
Please enter your name here