ರಮೇಶ್‌ ಬೇಗಾರ್‌ ನಿರ್ದೇಶನದ ‘ಜಲಪಾತ’ ಚಿತ್ರದ ‘ಎದೆಯ ದನಿಯ ಹಾಡು ಕೇಳು’ ಸಾಂಗ್‌ ಬಿಡುಗಡೆಯಾಗಿದೆ. ಸಾದ್ವಿನಿ ಕೊಪ್ಪ ಸಂಗೀತ ಸಂಯೋಜನೆಯ ಹಾಡಿಗೆ ವಿಜಯ ಪ್ರಕಾಶ್‌ ದನಿಯಾಗಿದ್ದಾರೆ. ರಜನೀಶ್‌, ನಾಗಶ್ರೀ ಬೇಗಾರ್‌, ಪ್ರಮೋದ್‌ ಶೆಟ್ಟಿ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

‘ಜಲಪಾತ’ ಸಿನಿಮಾದ ‘ಎದೆಯ ದನಿಯ ಹಾಡು ಕೇಳು’ ಸಾಂಗ್‌ ಬಿಡುಗಡೆಯಾಗಿದೆ. ಚಿತ್ರದ ನಿರ್ದೇಶಕ ರಮೇಶ್‌ ಬೇಗಾರ್‌ ಅವರ ರಚನೆಯ ಗೀತೆಯಿದು. ಸಾದ್ವಿನಿ ಕೊಪ್ಪ ಸಂಗೀತದಲ್ಲಿ, ವಿಜಯ್ ಪ್ರಕಾಶ್ ಈ ಹಾಡಿಗೆ ದನಿಯಾಗಿದ್ದಾರೆ. ಗಾಯಕಿ ಸಾದ್ವಿನಿ ಕೊಪ್ಪ ಅವರು ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕಿಯಾಗಿದ್ದಾರೆ. ಖ್ಯಾತ ಗಾಯಕ ನಗರ ಶ್ರೀನಿವಾಸ ಉಡುಪ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಿರ್ದೇಶಕ ರಮೇಶ್‌ ಬೇಗಾರ್‌, ‘ಜಲಪಾತ ನನ್ನ ನಿರ್ದೇಶನದ ಎರಡನೇ ಸಿನಿಮಾ. ಪರಿಸರ ಕುರಿತು ಜಾಗೃತಿ ಮೂಡಿಸುವ ಹಾಡುಗಳು ಸಾಕಷ್ಟು ಬಂದಿದೆ. ಆದರೆ ಈ ಹಾಡು ಸ್ವಲ್ಪ ವಿಭಿನ್ನ. ಮೊದಲ ನುಡಿಯಲ್ಲಿ ಪರಿಸರ ನಮಗೆ ಏನೆಲ್ಲಾ ನೀಡಿದೆ ಎಂದಿದ್ದರೆ, ಎರಡನೇ ನುಡಿಯಲ್ಲಿ ನಮ್ಮಿಂದ ಪರಿಸರ ಏನಾಗುತ್ತಿದೆ ಎಂದಿದೆ’ ಎನ್ನುತ್ತಾರೆ. ‘ಪರಿಸರ ತಜ್ಞ ಯಲ್ಲಪ್ಪ ರೆಡ್ಡಿ ಅವರು ನನ್ನ ಗುರುಗಳು. ಪರಿಸರದ ಬಗ್ಗೆ ಅರಿವು ಮೂಡಿಸುವ ಚಿತ್ರ ನಿರ್ಮಿಸಬೇಕೆಂಬ ಹಂಬಲದಿಂದ ಈ ಚಿತ್ರ ಮಾಡಿದ್ದೇನೆ. ಮಲೆನಾಡ ಸೊಗಡಿನ ಈ ಚಿತ್ರ ಎಲ್ಲರ ಮನಸ್ಸಿಗೆ ಹತ್ತಿರವಾಗಲಿದೆ’ ಎನ್ನುವುದು ನಿರ್ಮಾಪಕ ಟಿ ಸಿ ರವೀಂದ್ರ ಅವರ ಮಾತು. ರಜನೀಶ್‌, ನಾಗಶ್ರೀ ಬೇಗಾರ್‌, ಪ್ರಮೋದ್‌ ಶೆಟ್ಟಿ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

LEAVE A REPLY

Connect with

Please enter your comment!
Please enter your name here