‘ಕಾಟೇರ’ ಸಿನಿಮಾದ ಪ್ರೀ ರಿಲೀಸ್‌ ಇವೆಂಟ್‌ ಮಂಡ್ಯದಲ್ಲಿ ಡಿಸೆಂಬರ್‌ 23ರಂದು ನಡೆಯಲಿದೆ. ಅಂದೇ ಚಿತ್ರದ ರೈತರ ಹಾಡೊಂದನ್ನು ಬಿಡುಗಡೆ ಮಾಡುವುದು ಚಿತ್ರತಂಡದ ಯೋಜನೆ. ಹೀರೋ ದರ್ಶನ್‌ ಈ ಮಾಹಿತಿ ಹಂಚಿಕೊಂಡು ಅಭಿಮಾನಿಗಳಿಗೆ ಕರೆ ಕೊಟ್ಟಿದ್ದಾರೆ.

ದರ್ಶನ್‌, ಆರಾಧನಾ ಮುಖ್ಯ ಭೂಮಿಕೆಯಲ್ಲಿರುವ ಬಹುನಿರೀಕ್ಷಿತ ‘ಕಾಟೇರ’ ಚಿತ್ರದ ಪ್ರೀ-ರಿಲೀಸ್ ಇವೆಂಟ್ ಡಿಸೆಂಬರ್‌ 23ರಂದು ಮಂಡ್ಯದಲ್ಲಿ ನಡೆಯಲಿದೆ ಎಂದು ದರ್ಶನ್ ಮಾಹಿತಿ ಹಂಚಿಕೊಂಡಿದ್ದಾರೆ. ಈ ಕುರಿತು ದರ್ಶನ್‌ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದು, ‘ರೈತರ ದಿನದಂದು ನಮ್ಮ ‘ಕಾಟೇರ’ ಚಿತ್ರದ ಪ್ರೀ-ರಿಲೀಸ್ ಇವೆಂಟ್ ಮಂಡ್ಯದಲ್ಲಿ ನಡೆಯಲಿದೆ. ಈ ವಿಶೇಷ ದಿನದಂದೇ ನಮ್ಮ ಚಿತ್ರದ ರೈತರ ಹಾಡನ್ನು ಬಿಡುಗಡೆಗೊಳಿಸಲಿದ್ದೇವೆ! ಎಲ್ಲಾ ಪ್ರೀತಿಯ ಸೆಲೆಬ್ರಿಟಿಗಳಿಗೆ ನಲ್ಮೆಯ ಸ್ವಾಗತ’ ಎಂದು ಬರೆದುಕೊಂಡಿದ್ದಾರೆ. ಚಿತ್ರವನ್ನು Rockline Entertainments Pvt. Ltd ಬ್ಯಾನರ್‌ ಅಡಿ ರಾಕ್‌ಲೈನ್‌ ವೆಂಕಟೇಶ್‌ ನಿರ್ಮಿಸಿದ್ದಾರೆ. ವಿ ಹರಿಕೃಷ್ಣ ಸಂಗೀತ ಸಂಯೋಜನೆ, ಸುಧಾಕರ್‌ ಎಸ್‌ ರಾಜ್‌ ಛಾಯಾಗ್ರಹಣ, ಕೆ ಎಮ್‌ ಪ್ರಕಾಶ್‌ ಸಂಕಲನ ಚಿತ್ರಕ್ಕಿದೆ. ಸಿನಿಮಾ ಇದೇ ಡಿಸೆಂಬರ್‌ 29ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

LEAVE A REPLY

Connect with

Please enter your comment!
Please enter your name here