ವಸಂತ್‌ ವಿಷ್ಣು ನಟಿಸಿ, ನಿರ್ದೇಶಿಸಿರುವ ‘ಕಪ್ಪು ಬಿಳುಪಿನ ನಡುವೆ’ ಸಿನಿಮಾ ಫೆಬ್ರವರಿ 23ರಂದು ತೆರೆಕಾಣಲಿದೆ. ಸಿನಿಮಾ ಕನ್ನಡ ಮಾತ್ರವಲ್ಲದೆ ತಮಿಳು ಭಾಷೆಯಲ್ಲೂ ತೆರೆಕಾಣಲಿದೆ. ಚಿತ್ರದ ಟ್ರೇಲರ್ ವೀಕ್ಷಿಸಿದ ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ.

ಹಾರರ್‌ ಸಿನಿಮಾ ‘ಕಪ್ಪು ಬಿಳುಪಿನ ನಡುವೆ’ ನಾಡಿದ್ದು ಫೆಬ್ರವರಿ 23ರಂದು ತೆರೆಕಾಣಲಿದೆ. ವೃತ್ತಿಯಲ್ಲಿ ವೈದ್ಯರಾಗಿರುವ ಧರ್ಮೇಂದ್ರ ನಿರ್ಮಾಣದ ಚಿತ್ರದಲ್ಲಿ ವಸಂತ್‌ ವಿಷ್ಣು ನಟಿಸಿ, ನಿರ್ದೇಶಿಸಿದ್ದಾರೆ. ಈ ಚಿತ್ರದ ಟ್ರೇಲರ್ ವೀಕ್ಷಿಸಿದ ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ. ಕನ್ನಡ ಹಾಗೂ ತಮಿಳಿನಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದೆ. ‘ಕಪ್ಪು ಬಿಳುಪಿನ ನಡುವೆ” ಹಾರಾರ್ ಚಿತ್ರವಾಗಿದ್ದು, ಕಪ್ಪು ಬಿಳುಪನ್ನು ಕತ್ತಲು, ಬೆಳುಕಿಗೆ ಹೋಲಿಸಬಹುದು. ಪಾಸಿಟಿವ್ ಹಾಗೂ ನೆಗಟಿವ್ ಎನರ್ಜಿ ಅಂತಲೂ ಹೇಳಬಹುದು. ಯೂಟ್ಯೂಬರ್‌ಗಳ ಸುತ್ತ ಈ ಚಿತ್ರದ ಕಥೆ ಸುತ್ತುತ್ತದೆ’ ಎನ್ನುತ್ತಾರೆ ನಿರ್ದೇಶಕ ವಸಂತ್‌ ವಿಷ್ಣು. ವಿದ್ಯಾಶ್ರೀ ಗೌಡ ಚಿತ್ರದ ನಾಯಕಿ. ಬಿರಾದಾರ್, ಶರತ್ ಲೋಹಿತಾಶ್ವ, ಹಾಸ್ಯ ನಟ ಹರೀಶ್, ನವೀನ್ ರಘು, ಮಾಹೀನ್ ಭಾರದ್ವಾಜ್, ತೇಜಸ್ವಿನಿ ಇತರೆ ಪ್ರಮುಖ ಪಾತ್ರಧಾರಿಗಳು. ಡಾ ವಿ ನಾಗೇಂದ್ರ ಪ್ರಸಾದ್ ಚಿತ್ರದ ಮೂರು ಹಾಡುಗಳನ್ನು ರಚಿಸಿದ್ದಾರೆ. ರಿಶಾಲ್ ಸಾಯಿ ಸಂಗೀತ, ‘ಕೆಜಿಎಫ್’ ಸಿನಿಮಾ ಖ್ಯಾತಿಯ ಸಂತೋಷ್ ವೆಂಕಿ, ಶ್ರೀಧರ್ ಕಶ್ಯಪ್ ಹಾಡುಗಳನ್ನು ಹಾಡಿದ್ದಾರೆ. ಪ್ರವೀಣ್ ಶೆಟ್ಟಿ ಛಾಯಾಗ್ರಹಣ ಹಾಗೂ ಅಮಿತ್ ಜಾವಲ್ಕರ್ ಸಂಕಲನ ಚಿತ್ರಕ್ಕಿದೆ.

LEAVE A REPLY

Connect with

Please enter your comment!
Please enter your name here