ಇತ್ತೀಚೆಗೆ ವೈರಲ್‌ ಆಗಿದ್ದ ನಟ – ನಿರ್ದೇಶಕ ಉಪೇಂದ್ರ ಅವರ ರಚನೆಯ ಹಾಡಿನ ಸಾಲು ‘ಕರಿಮಣಿ ಮಾಲೀಕ ನೀನಲ್ಲ’ ಚಿತ್ರದ ಶೀರ್ಷಿಕೆಯಾಗಿದೆ. ಈ ಹಿಂದೆ ‘ಯು ಟರ್ನ್ 2’ ಚಿತ್ರ ನಿರ್ದೇಶಿಸಿದ್ದ ಚಂದ್ರು ಓಬಯ್ಯ ಅವರು ನೂತನ ಸಿನಿಮಾ ನಿರ್ದೇಶಿಸಲಿದ್ದಾರೆ. ರಮಿಕ ಸುತಾರ ಚಿತ್ರದ ನಾಯಕಿಯಾಗಿ ನಟಿಸುತ್ತಿದ್ದಾರೆ.

‘ಯು ಟರ್ನ್ 2’ ಖ್ಯಾತಿಯ ಚಂದ್ರು ಓಬಯ್ಯ ನೂತನ ಸಿನಿಮಾ ಘೋಷಿಸಿದ್ದಾರೆ. ಇತ್ತೀಚೆಗೆ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ಹಾಡಿನ ಸಾಲು ‘ಕರಿಮಣಿ ಮಾಲೀಕ ನೀನಲ್ಲ’ ಚಿತ್ರಕ್ಕೆ ಶೀರ್ಷಿಕೆಯಾಗಿದೆ. ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಚಂದ್ರು, ”ಯೂ ಟರ್ನ್ 2 ಆದ ನಂತರ ‘ರಾಮು ಅಂಡ್ ರಾಮು’ ಚಿತ್ರ ಮಾಡಿದ್ದೆ. ಅದು ಸೆನ್ಸಾರ್ ಹಂತದಲ್ಲಿದೆ. ಅಲ್ಲದೆ ‘ಪ್ಯಾಟಿ ಹುಡ್ಗಿ ಹಳ್ಳಿ ಲೈಫು’ ಚಿತ್ರೀಕರಣ ಹಂತದಲ್ಲಿದೆ. ಈಗ ‘ಕರಿಮಣಿ ಮಾಲೀಕ ನೀನಲ್ಲ’ ಟೈಟಲ್‌ನ ಚಿತ್ರವನ್ನು ಶುರು ಮಾಡುತ್ತಿದ್ದೇನೆ. ಎಳನೀರು ಮಾರೋ ಹುಡುಗ, ಹೂ ಮಾರೋ ಹುಡುಗಿಯ ನಡುವೆ ನಡೆಯೋ ವಿಭಿನ್ನ ಪ್ರೇಮಕಥೆ ಈ ಚಿತ್ರದಲ್ಲಿದೆ’ ಎನ್ನುತ್ತಾರೆ.

ತಾವು ಸಿದ್ಧಪಡಿಸಿದ್ದ ಕತೆಗೆ ಈ ಹಾಡಿನ ಸಾಲು ಸೂಕ್ತವೆನಿಸಿದ್ದರಿಂದ, ಅದನ್ನೇ ಟೈಟಲ್‌ ಆಗಿಸಿದ್ದಾರೆ ಚಂದ್ರು. ಮೇ ತಿಂಗಳಿನಲ್ಲಿ ಚಿತ್ರೀಕರಣ ಪ್ರಾರಂಭಿಸಿ, 40 ದಿನಗಳ‌ ಕಾಲ‌ ಬೆಂಗಳೂರು, ಮೈಸೂರು, ಮಡಿಕೇರಿ ಸುತ್ತಮುತ್ತ ಶೂಟಿಂಗ್ ನಡೆಸುವುದು ಅವರ ಯೋಜನೆ. ಚಿತ್ರದಲ್ಲಿ 4 ಹಾಡುಗಳಿದ್ದು, ಅವರೇ ಸಂಗೀತ ಸಂಯೋಜಿಸುತ್ತಿದ್ದಾರೆ. ನಾಯಕಿಯಾಗಿ ರಮಿಕಾ ಸುತಾರ ಅಭಿನಯಿಸುತ್ತಿದ್ದು, ನಾಯಕನ ಪಾತ್ರಕ್ಕೆ ಹುಡುಕಾಟ ನಡೆಸುತ್ತಿದ್ದಾರೆ. ಮೂಲತಃ ಗುಲ್ಬರ್ಗದವರಾದ ರಮಿಕಾ ಸುತಾರ ಅವರಿಗೆ ಇದು ಮೊದಲ ಸಿನಿಮಾ. ಚಿತ್ರದಲ್ಲಿ ಅವರಿಗೆ ಹೂ ಮಾರುವ ಹುಡುಗಿ ಪಾತ್ರವಿದೆ. ವೀನಸ್ ನಾಗರಾಜಮೂರ್ತಿ ಚಿತ್ರದ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದಾರೆ.

LEAVE A REPLY

Connect with

Please enter your comment!
Please enter your name here