ವಾರಾಹಿ ಪ್ರೊಡಕ್ಷನ್ಸ್‌ನಲ್ಲಿ ರಾಧಾಕೃಷ್ಣ ನಿರ್ದೇಶಿಸುತ್ತಿರುವ ಸಿನಿಮಾದೊಂದಿಗೆ ಕಿರೀಟಿ ಬೆಳ್ಳಿತೆರೆ ಅಭಿಯಾನ ಶುರುವಾಗಿದೆ. ಇಂದು ನೆರವೇರಿದ ಮುಹೂರ್ತ ಸಮಾರಂಭದಲ್ಲಿ ನಿರ್ದೇಶಕ ರಾಜಮೌಳಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಹೀರೋ ಇಂಟ್ರಡಕ್ಷನ್‌ ಟೀಸರ್‌ ರಿಲೀಸ್‌ ಮಾಡಿದರು. ಶ್ರೀಲೀಲಾ ನಾಯಕಿಯಾಗಿ ನಟಿಸುತ್ತಿದ್ದು, ರವಿಚಂದ್ರನ್‌ ಮತ್ತು ಬಾಲಿವುಡ್‌ ತಾರೆ ಜೆನಿಲಿಯಾ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ಮಾಜಿ ಸಚಿವ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಅದ್ಧೂರಿಯಾಗಿ ಗಾಂಧಿನಗರದ ಅಂಗಳಕ್ಕೆ ಪಾದಾರ್ಪಣೆ ಮಾಡಿದ್ದಾರೆ. ‘ಬಾಹುಬಲಿ’ ಖ್ಯಾತಿಯ ಎಸ್.ಎಸ್. ರಾಜಮೌಳಿಯ ಅಭಯ ಹಸ್ತದಿಂದ ಕಿರೀಟಿ ಚೊಚ್ಚಲ ಚಿತ್ರಕ್ಕೆ ಆರಂಭ ಸಿಕ್ಕಿದೆ. ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್‌ಮುಖ್, ಶ್ರೀಲೀಲಾ ಸೇರಿದಂತೆ ದೊಡ್ಡ ತಾರಾಬಳಗ ಇರುವ ಸಿನಿಮಾದ ಮುಹೂರ್ತ ಇಂದು ನೆರವೇರಿತು.

ಕಿರೀಟಿ ಸ್ಟಂಟ್, ಡ್ಯಾನ್ಸ್ ಮೆಚ್ಚಿದ ರಾಜಮೌಳಿ
ಕಿರೀಟಿ ಚೊಚ್ಚನ ಸಿನಿಮಾಗೆ ಕ್ಲ್ಯಾಪ್ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ ರಾಜಮೌಳಿ ಹೀರೋ ಇಂಟ್ರೂಡಕ್ಷನ್ ಟೀಸರ್ ನೋಡಿ ಕಿರೀಟಿ ಬೆನ್ನುತಟ್ಟಿದರು. “ನನಗೆ ಪ್ರಾಮಿಸಿಂಗ್ ಆಗಿರುವ ಯುವ ಪ್ರತಿಭೆಯನ್ನು ಲಾಂಚ್ ಮಾಡುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಇವರು ನಟನೆ ಮಾಡಬಹುದು, ಡ್ಯಾನ್ಸ್ ಮಾಡಬಹುದು, ಇವರು ಸ್ಟಂಟ್ಸ್ ಅನ್ನೂ ಮಾಡಬಹುದು. ಇದೇ ಸಂದರ್ಭದಲ್ಲಿ ಯುವ ಪ್ರತಿಭೆಗೆ ಒಳ್ಳೆ ಲಾಂಚ್ ಕೂಡಬೇಕು. ಈ ಪ್ರತಿಭೆ ಈಗ ಅದ್ಭುತ ಕೈಗಳ ಜೊತೆ ಸೇರಿಕೊಂಡಿದೆ. ಅದಕ್ಕೆ ಖುಷಿಯಾಗುತ್ತಿದೆ” ಎಂದರು ರಾಜಮೌಳಿ.

ಕಿರೀಟಿ ಬಗ್ಗೆ ಏನಂದ್ರು ಕ್ರೇಜಿಸ್ಟಾರ್!
ಕ್ರೇಜಿಸ್ಟಾರ್ ರವಿಚಂದ್ರನ್ ಕಿರೀಟಿ ಸಿನಿಮಾದಲ್ಲಿ ಸ್ಪೆಷಲ್ ರೋಲ್‌ವೊಂದಕ್ಕೆ ಬಣ್ಣ ಹಚ್ಚಿದ್ದಾರೆ. ಕಿರೀಟಿ ತಂದೆಯಾಗಿ ಕಾಣಿಸಿಕೊಳ್ಳಲಿರುವ ಅವರು ಸಿನಿಮಾ ಬಗ್ಗೆ ಸ್ಟಾರ್ ಕಾಸ್ಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಏರ್‌ಪೋರ್ಟ್‌ನಲ್ಲಿ ಒಮ್ಮೆ ಭೇಟಿ ಮಾಡಿದ್ದೆವು. ನನಗೆ ನಟನೆ ಬಗ್ಗೆ ಸಾವಿರ ಪ್ರಶ್ನೆ ಕೇಳಿದ್ದರು. ಈ ಸಿನಿಮಾದಲ್ಲಿ ಕಿರೀಟಿಗೆ ಸಾರಥಿ ಬಂದು ರಾಧಾಕೃಷ್ಣ. ಹಿಂದೆ ಜನಾರ್ಧನ್ ರೆಡ್ಡಿಯವರ ಆಶೀರ್ವಾದ. ಶ್ರೀಲೀಲಾ ಇದ್ದಾರೆ, ಜನೀಲಿಯಾ ಇದ್ದಾರೆ. ನಾನೂ ಇದ್ದೀನಿ. ಇದಕ್ಕಿಂತ ಒಳ್ಳೆಯ ಪ್ಯಾಕೇಜ್ ಬೇಕಾ ನಿಮಗೆ?” ಎಂದು ಪ್ರಶ್ನಿಸಿ ಯುವ ಹೀರೋಗೆ ಶುಭ ಹಾರೈಸಿದರು.

ಕನ್ನಡಕ್ಕೆ ಜೆನಿಲಿಯಾ ಕಮ್‌ಬ್ಯಾಕ್!
ಶಿವರಾಜ್ ಕುಮಾರ್ ನಟನೆಯ ‘ಸತ್ಯ್ ಇನ್ ಲವ್’ ಸಿನಿಮಾದಲ್ಲಿ ನಟಿಸಿದ್ದ ಜೆನಿಲಿಯಾ ಮತ್ತೆ ಸ್ಯಾಂಡಲ್‌ವುಡ್‌ಗೆ ಮರಳಿದ್ದಾರೆ. ವಿವಾಹದ ಬಳಿಕ ಚಿತ್ರರಂಗದಿಂದ ದೂರ ಉಳಿದಿದ್ದ ಜೆನೀಲಿಯಾ 10 ವರ್ಷಗಳ ಬಳಿಕ ನಟನೆಗೆ ಹಿಂದಿರುಗಿದ್ದಾರೆ. ”ಹತ್ತು ವರ್ಷಗಳ ಬಳಿಕ ಮತ್ತೆ ನಟನೆಗೆ ಮರಳುತ್ತಿದ್ದೇನೆ. ಇದು ತುಂಬಾನೇ ಸ್ಪೆಷಲ್ ಪ್ರಾಜೆಕ್ಟ್. ನಿಮ್ಮ ಮೊದಲ ಸಿನಿಮಾ. ಈ ಸಿನಿಮಾದುದ್ದಕ್ಕೂ ನಾವು ಇರುತ್ತೇವೆ” ಎಂದರು.

ಕಿರೀಟಿ ಸಿನಿಮಾದ ಮುಹೂರ್ತದ ವೇಳೆ ಹೀರೋ ಇಂಟ್ರಡಕ್ಷನ್ ಟೀಸರ್ ರಿಲೀಸ್ ಮಾಡಲಾಯಿತು. ಆಕ್ಷನ್, ಸ್ಟಂಟ್, ಡ್ಯಾನ್ಸ್, ಆಕ್ಟಿಂಗ್‌ನ ಟೀಸರ್‌ ಗಮನ ಸೆಳೆಯುತ್ತದೆ. ತೆಲುಗಿನ ಖ್ಯಾತ ಪ್ರೊಡಕ್ಷನ್ ಹೌಸ್ ವಾರಾಹಿ ಫಿಲ್ಮಂ ಪ್ರೊಡಕ್ಷನ್‌ನಡಿ ಅದ್ಧೂರಿ ಬಜೆಟ್‌ನಲ್ಲಿ ತಯಾರಾಗುತ್ತಿರುವ ವಾರಾಹಿ ಸಂಸ್ಥೆಯ 15ನೇ ಸಿನಿಮಾ ಇದು. ‘ಮಯಾಬಜಾರ್’ ಸಿನಿಮಾ ಖ್ಯಾತಿಯ ರಾಧಾಕೃಷ್ಣರೆಡ್ಡಿ ನಿರ್ದೇಶನ, ಬಾಹುಬಲಿ ಛಾಯಾಗ್ರಾಹ ಕೆ.ಕೆ.ಸೆಂಥಿಲ್ ಕುಮಾರ್ ಕ್ಯಾಮೆರಾ, ಖ್ಯಾತ ಮ್ಯೂಸಿಕ್ ಡೈರೆಕ್ಟರ್ ದೇವಿಶ್ರೀಪ್ರಸಾದ್ ಮ್ಯೂಸಿಕ್, ಭಾರತದ ಬಹುಬೇಡಿಕೆಯ ಸ್ಟಂಟ್‌ ಮಾಸ್ಟರ್ ಪೀಟರ್ ಹೇನ್ ಆಕ್ಷನ್, ರವೀಂದರ್ ಕಲಾನಿರ್ದೇಶನ ಚಿತ್ರಕ್ಕಿದೆ. ಕನ್ನಡ ಮತ್ತು ತೆಲುಗು ಎರಡು ಭಾಷೆಗಳಲ್ಲಿ ಸಿನಿಮಾ ತಯಾರಾಗಲಿದೆ.

LEAVE A REPLY

Connect with

Please enter your comment!
Please enter your name here