ಗಣೇಶ್‌ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದ ಮೂರನೇ ಸಾಂಗ್‌ ‘ದ್ವಾಪರ ದಾಟುತ’ ಬಿಡುಗಡೆಯಾಗಿದೆ. ವಿ ನಾಗೇಂದ್ರ ಪ್ರಸಾದ್‌ ರಚನೆಯ ಈ ಹಾಡಿಗೆ ಅರ್ಜುನ್‌ ಜನ್ಯ ಸಂಗೀತ ಸಂಯೋಜನೆಯಿದೆ. ‘ಸರಿಗಮಪ’ ಖ್ಯಾತಿಯ ಜಸ್ಕರಣ್‌ ಸಿಂಗ್‌ ಈ ಮೆಲೋಡಿ ಹಾಡಿಗೆ ದನಿಯಾಗಿದ್ದಾರೆ. ಸಿನಿಮಾ ಆಗಸ್ಟ್‌ 15ರಂದು ತೆರೆಕಾಣಲಿದೆ.

ಶ್ರೀನಿವಾಸರಾಜು ನಿರ್ದೇಶನದಲ್ಲಿ ಗಣೇಶ್‌ ನಟಿಸಿರುವ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದ ಮೂರನೇ ಹಾಡು ‘ದ್ವಾಪರ ದಾಟುತ’ ರಿಲೀಸ್‌ ಆಗಿದೆ. ಈ ಹಿಂದೆ ಬಿಡುಗಡೆಯಾಗಿದ್ದ ‘ಮೈ ಮ್ಯಾರೇಜ್ ಇಸ್ ಫಿಕ್ಸ್ಡ್’, ‘ಚಿನ್ನಮ್ಮ’ ಹಾಡುಗಳಿಗೆ ಸಿನಿಪ್ರಿಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೀಗ ‘ದ್ವಾಪರ ದಾಟುತ’ ರೊಮ್ಯಾಂಟಿಕ್‌ ಸಾಂಗ್‌ ಬಂದಿದೆ. ವಿ ನಾಗೇಂದ್ರ ಪ್ರಸಾದ್‌ ರಚನೆಯ ಈ ಹಾಡಿಗೆ ಅರ್ಜುನ್‌ ಜನ್ಯ ಸಂಗೀತ ಸಂಯೋಜನೆಯಿದೆ. ‘ಸರಿಗಮಪ’ ಖ್ಯಾತಿಯ ಜಸ್ಕರಣ್‌ ಸಿಂಗ್‌ ಈ ಮೆಲೋಡಿ ಹಾಡಿಗೆ ದನಿಯಾಗಿದ್ದಾರೆ. ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್‌ಟೇನ್‌ಮೆಂಟ್‌ ಬ್ಯಾನರ್‌ನಡಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಿಸಿದ್ದಾರೆ. ಬೆಂಗಳೂರು, ವಿಯೆಟ್ನಾಂ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಇದು ಗಣೇಶ್ ಅಭಿನಯದ 41ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್ ಇತರೆ ಪ್ರಮುಖ ಪಾತ್ರಗಳಲ್ಲಿದ್ದಾರೆ. ಆಗಸ್ಟ್‌ 15ರಂದು ಸಿನಿಮಾ ತೆರೆಕಾಣಲಿದೆ.

LEAVE A REPLY

Connect with

Please enter your comment!
Please enter your name here