ಖ್ಯಾತ ಚಿತ್ರನಿರ್ದೇಶಕ ಟಿ ಎಸ್‌ ನಾಗಾಭರಣ ಅವರ ಪತ್ನಿ ನಾಗಿಣಿ ಭರಣ ಚೊಚ್ಚಲ ನಿರ್ದೇಶನದ ‘ಜೀನಿಯಸ್‌ ಮುತ್ತ’ ಸಿನಿಮಾ ತೆರೆಗೆ ಸಿದ್ಧವಾಗಿದೆ. ಮಾಸ್ಟರ್‌ ಶ್ರೇಯಸ್‌ ಶೀರ್ಷಿಕೆ ಪಾತ್ರದಲ್ಲಿ ನಟಿಸಿದ್ದು, ಚಿತ್ರದ ಅತಿಥಿ ಪಾತ್ರದಲ್ಲಿ ವಿಜಯ ರಾಘವೇಂದ್ರ ಕಾಣಿಸಿಕೊಂಡಿದ್ದಾರೆ.

‘ಸಿನಿಮಾ ನಿರ್ದೇಶನ ಮಾಡುವಂತೆ ವರ್ಷಗಳಿಂದ ಹಲವು ಹೇಳುತ್ತಲೇ ಇದ್ದರು. ನನಗೆ ಸಾಧ್ಯವಾಗಿರಲಿಲ್ಲ. ಕೊನೆಗೂ ಸ್ನೇಹಿತರ ಸಹಕಾರದಿಂದ ಸಿನಿಮಾ ನಿರ್ದೇಶಿಸಿದ್ದೇನೆ. ವಿಭಿನ್ನ ಕಥಾಹಂದರದ ಸಿನಿಮಾದ ಬಹುಪಾಲು ಚಿತ್ರೀಕರಣ ಬಿಳಿಗಿರಿರಂಗ ಬೆಟ್ಟದಲ್ಲಿ ನಡೆದಿದೆ’ ಎನ್ನುತ್ತಾರೆ ‘ಜೀನಿಯಸ್‌ ಮುತ್ತ’ ಸಿನಿಮಾದ ನಿರ್ದೇಶಕಿ ನಾಗಿಣಿ ಭರಣ. ಖ್ಯಾತ ಚಿತ್ರನಿರ್ದೇಶಕ ಟಿ ಎಸ್‌ ನಾಗಾಭರಣ ಅವರ ಪತ್ನಿ ನಾಗಿಣಿ ಭರಣ ಅವರು ಇಲ್ಲಿಯವರೆಗೆ ವಸ್ತ್ರವಿನ್ಯಾಸಕಿಯಾಗಿ ಕಾರ್ಯನಿರ್ವಹಿಸಿದ್ದರು. ಈಗ ಅವರ ನಿರ್ದೇಶಕಿಯಾಗಿದ್ದಾರೆ. ಚಿತ್ರ ಸಿದ್ಧವಾಗಿದ್ದು, ಇದೇ ಆಗಸ್ಟ್‌ನಲ್ಲಿ ತೆರೆಗೆ ಬರಲಿದೆ. ಶೀರ್ಷಿಕೆ ಪಾತ್ರದಲ್ಲಿ ಮಾಸ್ಟರ್‌ ಶ್ರೇಯಸ್‌ ನಟಿಸಿದ್ದು, ಅತಿಥಿ ಪಾತ್ರದಲ್ಲಿ ವಿಜಯ ರಾಘವೇಂದ್ರ ಕಾಣಿಸಿಕೊಂಡಿದ್ದಾರೆ. ಟಿ ಎಸ್ ನಾಗಾಭರಣ, ಗಿರಿಜಾ ಲೋಕೇಶ್, ಸುಂದರರಾಜ್, ಪನ್ನಗಾ ಭರಣ ಇತರೆ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

‘ನಾಗಿಣಿ ಅವರು ಈಗ ಸ್ವತಂತ್ರ ನಿರ್ದೇಶನ ಮಾಡಿದ್ದಾರಷ್ಟೇ. ಆದರೆ ನನ್ನ ಎಲ್ಲಾ ಸಿನಿಮಾ, ಧಾರಾವಾಹಿಗಳ ನಿರ್ದೇಶನಕ್ಕೆ ಹಲವು ವರ್ಷಗಳಿಂದ ಸಹಕಾರ ನೀಡುತ್ತಿದ್ದರು. ಈಗ ಮೊದಲ ಚಿತ್ರ ನಿರ್ದೇಶನ ಮಾಡಿದ್ದಾರೆ. ನಾನು ಈ ಚಿತ್ರದಲ್ಲಿ ಪುಟ್ಟ ಪಾತ್ರ ಮಾಡಿದ್ದೇನೆ’ ಎಂದು ನಿರ್ದೇಶಕ ಟಿ ಎಸ್‌ ನಾಗಾಭರಣ ಚಿತ್ರತಂಡಕ್ಕೆ ಶುಭ ಹಾರೈಸಿದರು. ಮಾಸ್ಟರ್‌ ಶ್ರೇಯಸ್‌ ಈ ಚಿತ್ರದೊಂದಿಗೆ ಬೆಳ್ಳಿತೆರೆಗೆ ಪರಿಚಯವಾಗುತ್ತಿದ್ದಾರೆ. ನಾಗಾಭರಣ ಅವರಲ್ಲಿ ನಟನೆ ಕಲಿತಿರುವ ಶ್ರೇಯಸ್‌ಗಾಗಿ ಅವರ ತಾಯಿ ಲತಾ ಜೈಪ್ರಕಾಶ್‌ ‘ಜೀನಯಸ್‌ ಮುತ್ತ’ ಸಿನಿಮಾ ನಿರ್ಮಿಸಿದ್ದಾರೆ. ಚಿತ್ರದ ವಿಶೇಷ ಪಾತ್ರದಲ್ಲಿ ನಟಿಸಿರುವ ವಿಜಯ ರಾಘವೇಂದ್ರ, ‘ನಾನು ನಾಗಾಭರಣ ಸರ್‌ರಿಗೆ ಆಬಾರಿ. ಏಕೆಂದರೆ ನನ್ನನ್ನು ಎಲ್ಲರೂ ವಿಜಯ ರಾಘವೇಂದ್ರ ಅನ್ನುವುದಕ್ಕಿಂತ ಚಿನ್ನಾರಿಮುತ್ತ ಎನ್ನುವುದೇ ಹೆಚ್ಚು. ಅಂತಹ ಸೂಪರ್ ಹಿಟ್ ಚಿತ್ರದಲ್ಲಿ ನಟಿಸಲು ನನಗೆ ಅವಕಾಶ ನೀಡಿದವರು ನಾಗಾಭರಣ ಸರ್. ಈಗ ನಾಗಿಣಿ ಭರಣ ಅವರ ಮೊದಲ ನಿರ್ದೇಶನದಲ್ಲೂ ನಾನು ನಟಿಸಿರುವುದು ಖುಷಿಯಾಗಿದೆ’ ಎನ್ನುತ್ತಾರೆ. ಬಾಪು ಪದ್ಮನಾಭ್‌ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

LEAVE A REPLY

Connect with

Please enter your comment!
Please enter your name here