ನಾಗರಾಜ ಸೋಮಯಾಜಿ ನಿರ್ದೇಶನದಲ್ಲಿ ‘ಮರ್ಯಾದೆ ಪ್ರಶ್ನೆ’ ವಿಶಿಷ್ಟ ಶೀರ್ಷಿಕೆಯಡಿ ಸಿನಿಮಾ ತಯಾರಾಗಲಿದೆ. ಆರ್‌ಜೆ ಪ್ರದೀಪ್‌ ಒಡೆತನದ ಸಕ್ಕರ್‌ ಸ್ಟುಡಿಯೋ ಚಿತ್ರವನ್ನು ನಿರ್ಮಿಸುತ್ತಿದೆ. ಸಂದೀಪ್ ವೆಲ್ಲೂರಿ ಛಾಯಾಗ್ರಹಣ, ಅರ್ಜುನ್ ರಾಮು ಸಂಗೀತ ಚಿತ್ರಕ್ಕೆ ಇರಲಿದೆ.

ಚಿತ್ರನಿರ್ದೇಶಕ ಸಿಂಪಲ್ ಸುನಿಯಿಂದ ಹಿಡಿದು ನಟಿ ನಿಶ್ವಿಕಾ ನಾಯ್ಡು, ಸಂಯುಕ್ತಾ ಹೊರನಾಡು, ಸೆಲೆಬ್ರಿಟಿ ಜಿಮ್ ಟ್ರೇನರ್ ಶ್ರೀನಿವಾಸ ಗೌಡ, ನಿರಂಜನ್ ದೇಶಪಾಂಡೆ, ರುಕ್ಮಿಣಿ ವಸಂತ್, ನಾಗಭೂಷಣ, ಶೈನ್ ಶೆಟ್ಟಿ ಸೇರಿದಂತೆ ಚಿತ್ರರಂಗದ ಬಹಳಷ್ಟು ತಾರೆಯರು ಹಾಗೂ ತಂತ್ರಜ್ಞರು ತಮ್ಮ ಪಾಲಿನ ಮರ್ಯಾದೆ ಪ್ರಶ್ನೆ ಏನು ಎಂಬುದನ್ನು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಇವರು ಹೀಗೆ ಮಾರ್ಯಾದೆ ಪ್ರಶ್ನೆ ಬಗ್ಗೆ ಧ್ವನಿ ಎತ್ತುತ್ತಿದ್ದಂತೆ ಎಲ್ಲರ ತಲೆಯಲ್ಲಿ ಏನಿದು ಎಂಬ ಕುತೂಹಲದ ಪ್ರಶ್ನೆ ಹುಟ್ಟಿಕೊಂಡಿತ್ತು. ಇದಕ್ಕೀಗ ಉತ್ತರ ಸಿಕ್ಕಿದೆ. ‘ಮಾರ್ಯದೆ ಪ್ರಶ್ನೆ’ ಶೀರ್ಷಿಕೆಯಡಿ ಸಿನಿಮಾ ಬರುತ್ತಿದೆ.

RJ ಪ್ರದೀಪ್ ಮತ್ತು ನಟಿ ಶ್ವೇತಾ ಆರ್ ಪ್ರಸಾದ್ ಅವರ ಸಾರಥ್ಯದ ಸಕ್ಕತ್ ಸ್ಟುಡಿಯೋ ನಿರ್ಮಿಸುತ್ತಿರುವ ಚಿತ್ರವಿದು. ಕನ್ನಡ ಸಿನಿಮಾ ಸೆಲೆಬ್ರಿಟಿಗಳಿಂದ ಮಾರ್ಯಾದೆ ಪ್ರಶ್ನೆ ಬಗ್ಗೆ ಮಾತನಾಡಿಸಿ ಚಿತ್ರತಂಡ ವಿಭಿನ್ನವಾಗಿ ತಮ್ಮ ಟೈಟಲ್ ಲಾಂಚ್ ಮಾಡಿದೆ. ಈ ಚಿತ್ರಕ್ಕೆ ಪ್ರದೀಪ್ ಕತೆ ಬರೆದು ಕ್ರಿಯೇಟಿವ್ ಹೆಡ್ ಆಗಿ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ದಕ್ಷಿಣ ಭಾರತದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸೇರಿದಂತೆ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದ ‘ದಿ ಬೆಸ್ಟ್ ಆಕ್ಟರ್’ ಮೈಕ್ರೊ ಮೂವಿ ನಿರ್ದೇಶನ ಸೇರಿದಂತೆ, ಸಂಚಾರಿ ವಿಜಯ್ ನಟಿಸಿರುವ ‘ಪುಕ್ಸಟ್ಟೆ ಲೈಫ್’ ಚಿತ್ರವನ್ನು ನಿರ್ಮಿಸಿದ್ದ ನಾಗರಾಜ್ ಸೋಮಯಾಜಿ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶಿಸಲಿದ್ದಾರೆ. ಸಂದೀಪ್ ವೆಲ್ಲೂರಿ ಛಾಯಾಗ್ರಹಣ, ಅರ್ಜುನ್ ರಾಮು ಸಂಗೀತ, ಗೌಡ ಅರ್ಜುನ್ ಸಂಕಲನ ಚಿತ್ರಕ್ಕಿದೆ. ಮುಂದಿನ ದಿನಗಳಲ್ಲಿ ತಾರಾಗಣ ಹಾಗೂ ತಂತ್ರಜ್ಞರ ಬಗ್ಗೆ ಮಾಹಿತಿ ನೀಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ.

LEAVE A REPLY

Connect with

Please enter your comment!
Please enter your name here