ಜಟ್ಟ ಹಾಗೂ ಮೈತ್ರಿ ಚಿತ್ರಗಳ ಖ್ಯಾತಿಯ ಬಿ ಎಂ ಗಿರಿರಾಜ್ ನಿರ್ದೇಶನದಲ್ಲಿ ಹೊಸ ಚಿತ್ರವೊಂದು ಶುರುವಾಗಲಿದೆ. ಈ ಸಿನಿಮಾದಲ್ಲಿ ರಾಗಿಣಿ ದ್ವಿವೇದಿ ನಾಯಕಿ. ಸದ್ಯಕ್ಕೆ ಸಿನಿಮಾಗೆ ‘ಪ್ರೊಡಕ್ಷನ್‌ ನಂ 3’ ಎಂದು ಶೀರ್ಷಿಕೆ ಇಡಲಾಗಿದೆ. ಇತ್ತೀಚೆಗಷ್ಟೆ ಚಿತ್ರದ ಫಸ್ಟ್‌ಲುಕ್‌ ಪೋಸ್ಟರ್‌ ಸಹ ರಿಲೀಸ್‌ ಮಾಡಲಾಗಿದೆ.

ರಾಷ್ಟ್ರಪ್ರಶಸ್ತಿ ವಿಜೇತ ʼಹರಿವುʼ ಸಿನಿಮಾ ಖ್ಯಾತಿಯ ಗಿರೀಶ್ ವಿ ಗೌಡ ಸಾರಥ್ಯದಲ್ಲಿ, ರಾಮಕೃಷ್ಣ ನಿಗಾಡಿ ನಿರ್ಮಿಸುತ್ತಿರುವ ಹೊಸ ಸಿನಿಮಾದಲ್ಲಿ ರಾಗಿಣಿ ದ್ವಿವೇದಿ ನಾಯಕಿಯಾಗಿ ಮತ್ತೆ ಎಂಟ್ರಿ ಕೊಡಲಿದ್ದಾರೆ. ಜಟ್ಟ ಹಾಗೂ ಮೈತ್ರಿ ಚಿತ್ರಗಳ ಖ್ಯಾತಿಯ ಬಿ ಎಂ ಗಿರಿರಾಜ್ ನಿರ್ದೇಶನದಲ್ಲಿ ಈ ಹೊಸ ಚಿತ್ರವೊಂದು ಸದ್ಯದಲ್ಲೇ ಸೆಟ್ಟೇರಲಿದೆ. ಇತ್ತೀಚೆಗಷ್ಟೆ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್‌ ರಿಲೀಸ್‌ ಮಾಡಲಾಗಿತ್ತು. ಸದ್ಯಕ್ಕೆ ಈ ಸಿನಿಮಾಗೆ ‘ಪೊಡಕ್ಷನ್‌ ನಂ 3’ ಎಂದು ಶೀರ್ಷಿಕೆ ನೀಡಲಾಗಿದೆ.

‘ಚಿತ್ರಸಂತೆ’ ಮಾಸಪತ್ರಿಕೆಯ ಸಂಪಾದಕ ಗಿರೀಶ್ ವಿ ಗೌಡ ಮಾತನಾಡಿ, ‘ರಾಷ್ಟ್ರಪ್ರಶಸ್ತಿ ವಿಜೇತ ‘ಹರಿವು’ ಚಿತ್ರದಿಂದ ನನ್ನ ಸಿನಿ ಜರ್ನಿ ಆರಂಭವಾಯಿತು. ಹತ್ತು ವರ್ಷಗಳಿಂದ ರಾಗಿಣಿ ಅವರ ಜೊತೆಗೆ ಚಿತ್ರ ನಿರ್ಮಾಣ ಮಾಡಬೇಕೆಂದು ಪ್ರಯತ್ನಿಸುತ್ತಿದೆ. ಈಗ ಕಾಲ ಕೂಡಿ ಬಂದಿದೆ. ನಿರ್ದೇಶಕ ಬಿ ಎಂ ಗಿರಿರಾಜ್ ಒಳ್ಳೆ ಕಥೆ ಮಾಡಿಕೊಂಡಿದ್ದಾರೆ. ಹಿಂದೆ ‘ಹೊಂಬಣ್ಣ’ ಚಿತ್ರ ನಿರ್ಮಿಸಿದ್ದ ರಾಮಕೃಷ್ಣ ನಿಗಾಡಿ ಅವರು ಸಂಚಲನ ಮೂವೀಸ್ ಮೂಲಕ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಈಗ ಫಸ್ಟ್ ಲುಕ್ ಬಿಡುಗಡೆಯಾಗಿದೆ‌. ಕಿರಣ್, ಪೂಜಾ ಮುಂತಾದ ತಂತ್ರಜ್ಞರು ಇದಕ್ಕಾಗಿ ಶ್ರಮವಹಿಸಿದ್ದಾರೆ‌’ ಎಂದಿದ್ದಾರೆ.

ನಿರ್ದೇಶಕ ಬಿ ಎಂ ಗಿರಿರಾಜ್ ಮಾತನಾಡಿ ‘ಕೌಂಡಿನ್ಯ ಅವರು ನನ್ನ ನೆಚ್ಚಿನ ಲೇಖಕರು. ಅವರ ಕಥೆಗಳಿಂದ ಪ್ರೇರಿತನಾಗಿ ಈ ಚಿತ್ರದ ಕಥೆ ಸಿದ್ದ ಮಾಡಿದ್ದೇನೆ. ರಾಗಿಣಿ ಅವರ ಜೊತೆ ಇದು ನನ್ನ ಮೊದಲ ಸಿನಿಮಾ’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ನಂತರ ಮಾತನಾಡಿದ ನಟಿ ರಾಗಿಣಿ, ಫಸ್ಟ್ ಲುಕ್ ಸಖತ್ತಾಗಿದೆ‌. ಅದಕ್ಕಿಂತ ಚಿತ್ರದ ಶೀರ್ಷಿಕೆ ಹಾಗೂ ಕಥೆ ಇನ್ನೂ ಚೆನ್ನಾಗಿದೆ. ಸದ್ಯದಲ್ಲೇ ಶೀರ್ಷಿಕೆ ಅನಾವರಣವಾಗಲಿದೆ. ‘ಚಿತ್ರಸಂತೆ’ ಪತ್ರಿಕೆ ನನ್ನ ಹುಟ್ಟುಹಬ್ಬಕ್ಕೆ ಹೊರತಂದಿರುವ ಮುಖಪುಟ ಸಹ ಮುದ್ದಾಗಿದೆʼ ಎಂದು ಗಿರೀಶ್ ವಿ ಗೌಡ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

LEAVE A REPLY

Connect with

Please enter your comment!
Please enter your name here