ಈ ಹಿಂದೆ ಯಶಸ್ವೀ ‘ಒಂದು ಮೊಟ್ಟೆಯ ಕಥೆ’ ಸಿನಿಮಾ ಮಾಡಿದ್ದ ನಿರ್ಮಾಪಕರು ‘ರೂಪಾಂತರ’ ಚಿತ್ರದೊಂದಿಗೆ ಮತ್ತೆ ಚಿತ್ರರಂಗಕ್ಕೆ ಮರಳಿದ್ದಾರೆ. ಮಿಥಿಲೇಶ್ ಎಡವಲತ್ ನಿರ್ದೇಶನದ ಚಿತ್ರವನ್ನು ನಟ, ನಿರ್ದೇಶಕ ರಾಜ್‌ ಬಿ ಶೆಟ್ಟಿ ಪ್ರಸೆಂಟ್‌ ಮಾಡುತ್ತಿದ್ದಾರೆ. ಚಿತ್ರಕ್ಕೆ ಸಂಭಾಷಣೆ ರಚಿಸಿರುವ ರಾಜ್‌ ಶೆಟ್ಟಿ ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ.

‘ಕೆಲ ಸಿನಿಮಾಗಳು ಮನಸ್ಸಿಗೆ ಬಲು ಹತ್ತಿರ. ಅಂತಹ ಒಂದು ಸುಂದರವಾದ ಚಿತ್ರ ರೂಪಾಂತರ, ಈ ಸಿನಿಮಾದ ಭಾಗವಾಗಿರುವುದು, ಜೊತೆಗೆ ಈ ಚಿತ್ರವನ್ನು ನಿಮ್ಮ ಮುಂದೆ ಪ್ರಸ್ತುತಪಡಿಸುವ ಜವಾಬ್ದಾರಿ ನನಗೆ ಲಭಿಸಿರುವುದು ನನ್ನ ವೃತ್ತಿ ಜೀವನದ ಭಾಗ್ಯ’ ಎಂದು ಬರೆದುಕೊಂಡಿರುವ ನಟ, ನಿರ್ದೇಶಕ ರಾಜ್‌ ಬಿ ಶೆಟ್ಟಿ. ಅವರು ತಮ್ಮ Instagram ಖಾತೆಯಲ್ಲಿ ‘ರೂಪಾಂತರ’ ಸಿನಿಮಾದ ಫಸ್ಟ್‌ಲುಕ್‌ ಪೋಸ್ಟರ್‌ ಹಂಚಿಕೊಂಡಿದ್ದಾರೆ. ಈ ಹಿಂದೆ ‘ಒಂದು ಮೊಟ್ಟೆಯ ಕಥೆ’ ಚಿತ್ರವನ್ನು ನಿರ್ಮಿಸಿ ಹೆಸರು ಮಾಡಿದ ತಂಡ ಸೇರಿ ನಿರ್ಮಿಸಿರುವ ಚಿತ್ರವಿದು. ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಅಲ್ಲದೆ, ಸಂಭಾಷಣೆಯನ್ನೂ ಬರೆದಿದ್ದಾರೆ. ಜೊತೆಗೆ ತಮ್ಮ ನಿರ್ಮಾಣ ಸಂಸ್ಥೆಯಾದ ಲೈಟರ್ ಬುದ್ಧ ಫಿಲಂಸ್‌ ಮೂಲಕ ತೆರೆಗೆ ತರುತ್ತಿದ್ದಾರೆ. ‘ಒಂದು ಮೊಟ್ಟೆಯ ಕಥೆ’ ನಿರ್ಮಾಪಕರಾದ ಸುಹಾನ್ ಪ್ರಸಾದ್ ಈ ಚಿತ್ರ ನಿರ್ಮಿಸಿದ್ದಾರೆ. ಪ್ರವೀಣ್ ಶ್ರೀಯಾನ್ ಛಾಯಾಗ್ರಹಣ, ಮಿಧುನ್ ಮುಕುಂದನ್ ಸಂಗೀತ ಚಿತ್ರಕ್ಕಿದೆ.

ಹೊಸತನ ಬೇಕು ಎನ್ನುವ ಕೂಗು ಹೆಚ್ಚಾಗುತ್ತಿರುವ ಈ ಸಂಧರ್ಭದಲ್ಲಿ ‘ರೂಪಾಂತರ’ ಒಂದೊಳ್ಳೆಯ ಚಿತ್ರವಾಗಲಿದೆ ಎನ್ನುವುದು ಚಿತ್ರತಂಡದ ಅಭಿಪ್ರಾಯ. ಈ ಚಿತ್ರವು ಮಿಥಿಲೇಶ್ ಎಡವಲತ್ ಎನ್ನುವ ಪ್ರತಿಭಾವಂತ ಯುವಕನ ಪ್ರಥಮ ನಿರ್ದೇಶನದ ಚಿತ್ರ. ಸೋಮಶೇಖರ್ ಬೋಲೇಗಾಂವ್, ಲೇಖಾ ನಾಯ್ಡು, ಹನುಮಕ್ಕ, ಭರತ್ ಜಿ ಬಿ, ಅಂಜನ್ ಭಾರಧ್ವಾಜ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಸಂಕಲನ ಭುವನೇಶ್ ಮಣಿವಣ್ಣನ್, ನಿರ್ಮಾಣ ವಿನ್ಯಾಸ ಪ್ರವೀಣ್ ಮತ್ತು ಅರ್ಷದ್ ನಾಕ್ಕೋತ್ ಅವರದ್ದು. ‘ಟರ್ಬೋ’ ಮಲಯಾಳಂ ಚಿತ್ರವನ್ನು ಹಂಚಿಕೆ ಮಾಡಿದ್ದ ಲೈಟರ್ ಬುಧ್ಧ ಫಿಲಂಸ್‌ ಈ ಚಿತ್ರವನ್ನು ಹಂಚಿಕೆ ಮಾಡುತ್ತಿದೆ.

LEAVE A REPLY

Connect with

Please enter your comment!
Please enter your name here