ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳು ಘೋಷಣೆಯಾಗಿವೆ. ಚಲನಚಿತ್ರ ಕ್ಷೇತ್ರದಲ್ಲಿ ಹಿರಿಯ ಕಲಾವಿದರಾದ ಬ್ಯಾಂಕ್‌ ಜನಾರ್ಧನ್‌ ಮತ್ತು ಡಿಂಗ್ರಿ ನಾಗರಾಜ್‌ ಅವರಿಗೆ ಪ್ರಶಸ್ತಿಗಳು ಸಂದಿವೆ.

2022 – 23ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ನಾಡಿನ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಘೋಷಿಸಲಾಗಿದೆ. ಈ ಬಾರಿ ಚಲನಚಿತ್ರ ಕ್ಷೇತ್ರದಿಂದ ಹಿರಿಯ ಕಲಾವಿದರಾದ ಬ್ಯಾಂಕ್​ ಜನಾರ್ದನ್​ ಮತ್ತು ಡಿಂಗ್ರಿ ನಾಗರಾಜ್ ಅವರಿಗೆ ಪ್ರಶಸ್ತಿಗಳು ಸಂದಿವೆ. ರಂಗಭೂಮಿ ಹಿನ್ನೆಲೆಯ ಈ ಇಬ್ಬರು ಕಲಾವಿದರು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ನೂರಾರು ಸಿನಿಮಾಗಳ ಮೂಲಕ ಜನರನ್ನು ರಂಜಿಸಿದ್ದಾರೆ. ಪ್ರಶಸ್ತಿಗೆ ಹಿರಿಯ ಕಲಾವಿದರ ಆಯ್ಕೆಯ ಬಗ್ಗೆ ಚಿತ್ರರಂಗದ ವಲಯದಲ್ಲಿ ಸಹಮತವಿದೆ. ಚಿತ್ರರಂಗದವರು, ಆಪ್ತರು, ಅಭಿಮಾನಿಗಳು ಈ ಕಲಾವಿದರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರವು ಇಂದು (ಅಕ್ಟೋಬರ್ 31) ಬಿಡುಗಡೆ ಮಾಡಿದೆ. ಸಂಘ – ಸಂಸ್ಥೆಗಳು ಮತ್ತು ವೈಯಕ್ತಿಕವಾಗಿ ಒಟ್ಟು 68 ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ನೀಡಲಾಗಿದೆ. ಸಂಗೀತ, ಸಿನಿಮಾ, ಕ್ರೀಡೆ, ರಂಗಭೂಮಿ, ಶಿಕ್ಷಣ, ಪರಿಸರ, ಮಾಧ್ಯಮ, ತಂತ್ರಜ್ಞಾನ ಸೇರಿದಂತೆ ಹಲವು ವಿಭಾಗಗಳಲ್ಲಿ ಅನೇಕರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

LEAVE A REPLY

Connect with

Please enter your comment!
Please enter your name here