ಕನ್ನಡ ನಟ ರಿಷಿ ‘ಶೈತಾನ್‌’ ತೆಲುಗು ವೆಬ್‌ ಸರಣಿ ಪಾತ್ರಕ್ಕಾಗಿ OTTplay ‘ಅತ್ಯುತ್ತಮ ಖಳನಟ’ ಪ್ರಶಸ್ತಿ ಪಡೆದಿದ್ದಾರೆ. ಸದ್ಯ ತೆಲುಗು ಚಿತ್ರವೊಂದರಲ್ಲಿ ನಟಿಸುತ್ತಿರುವ ಅವರಿಗೆ ಟಾಲಿವುಡ್‌ನಲ್ಲಿ ಅವಕಾಶಗಳು ಬರುತ್ತಿವೆ. ಕನ್ನಡದಲ್ಲಿ ಅವರ ‘ರಾಮನ ಅವತಾರ’ ಸಿನಿಮಾ ತೆರೆಗೆ ಸಿದ್ಧವಾಗಿದೆ.

‘ಅಪರೇಷನ್ ಅಲಮೇಲಮ್ಮ’, ‘ಕವಲುದಾರಿ’ ಸಿನಿಮಾಗಳ ಖ್ಯಾತಿಯ ರಿಷಿ ‘ಶೈತಾನ್‌’ ತೆಲುಗು ವೆಬ್‌ ಸರಣಿಯಲ್ಲಿ ನಟಿಸಿದ್ದರು. ಈ ಸರಣಿಯ ಖಳಪಾತ್ರಕ್ಕಾಗಿ ಅವರಿಗೆ OTTplay ‘ಅತ್ಯುತ್ತಮ ಖಳನಟ’ ಪ್ರಶಸ್ತಿ ನೀಡಿ ಪುರಸ್ಕರಿಸಿದೆ. ಇತ್ತೀಚೆಗೆ ಮುಂಬೈನಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಭಾರತೀಯ ಸಿನಿಮಾರಂಗದ ಖ್ಯಾತನಾಮರ ಸಮ್ಮುಖದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿದ್ದಾರೆ. ಹತ್ತಾರು ವೆಬ್‌ ಸರಣಿಗಳು ಮೂಡಿಬಂದಿದ್ದು, ಸಾಕಷ್ಟು ಸ್ಪರ್ಧೆಯ ಮಧ್ಯೆ ರಿಷಿ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ.

‘ಶೈತಾನ್’ ವೆಬ್ ಸೀರಿಸ್ ಮೂಲಕ ತೆಲುಗು ಪ್ರೇಕ್ಷಕರಿಗೆ ಚಿರಪರಿಚಿತರಾಗಿರುವ ರಿಷಿ ಅವರಿಗೆ ಟಾಲಿವುಡ್‌ನಲ್ಲಿ ಅವಕಾಶಗಳು ಅರಸಿ ಬರುತ್ತಿವೆ. ಸದ್ಯ ಅವರೀಗ ತೆಲುಗು ಚಿತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ಹೈದರಾಬಾದ್‌ನಲ್ಲಿ ಸಿನಿಮಾದ ಶೂಟಿಂಗ್ ಭರದಿಂದ ನಡೆದಿದೆ. ನೈಜ ಘಟನೆ ಪ್ರೇರಿತ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ರಿಷಿ ಪ್ರಮುಖ ಪಾತ್ರದಲ್ಲಿದ್ದಾರೆ. ಯಶಸ್ವೀ ತೆಲುಗು ಚಿತ್ರನರ್ದೇಶಕ ಬಯೋಪಾಟಿ ಶ್ರೀನು ಅವರಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಗೋಪಿ ವಿಹಾನಿ ನಿರ್ದೇಶನದ ಚೊಚ್ಚಲ ಚಿತ್ರವಿದು. ರವಿ ಪಸನ ಫಿಲಂಸ್‌ ಕಾರ್ಪೊರೇಷನ್ ನಿರ್ಮಾಣದ ಈ ಚಿತ್ರದ ಇತರೆ ಪ್ರಮುಖ ಪಾತ್ರಗಳಲ್ಲಿ ತಿರುವೀರ್, ಫರಿಯಾ ಅಬ್ದುಲ್ಲಾ, ರವೀಂದರ್ ವಿಜಯ್, ಶೆಲ್ಲಿ ಕಿಶೋರ್, ಕಾಲಕೇಯ ಪ್ರಭಾಕರ್, ಚಿರಾಗ್ ಜಾನಿ ನಟಿಸುತ್ತಿದ್ದಾರೆ.

ಇನ್ನು ಕನ್ನಡದಲ್ಲಿ ರಿಷಿ ಅವರ ‘ರಾಮನ ಅವತಾರ’ ಸಿನಿಮಾ ರಿಲೀಸ್‌ಗೆ ಸಿದ್ಧವಾಗಿದೆ. ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ಈ ಚಿತ್ರದ ಇಬ್ಬರು ನಾಯಕಿಯರು. ಅರುಣ್ ಸಾಗರ್ ಮುಖ್ಯ ಪಾತ್ರದಲ್ಲಿದ್ದಾರೆ. ‘ರಾಮನ ಅವತಾರ’ ಸಿನಿಮಾಗೆ ವಿಕಾಸ್‌ ಪಂಪಾಪತಿ ನಿರ್ದೇಶನವಿದೆ. ಸ್ಟಾರ್ ಫ್ಯಾಬ್ ಪ್ರೊಡಕ್ಷನ್‌ನಡಿ ‘ಆಪರೇಷನ್ ಅಲಮೇಲಮ್ಮ’ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್‌ನ ಈ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶ್ ಪಾಂಡೆ ಕ್ಯಾಮೆರಾ, ಜೂಡಾ ಸ್ಯಾಂಡಿ ಸಂಗೀತ, ಅಮರನಾಥ್ ಸಂಕಲನವಿದೆ.

LEAVE A REPLY

Connect with

Please enter your comment!
Please enter your name here