ಕೆ ಶಿವರುದ್ರಯ್ಯ ನಿರ್ದೇಶನದಲ್ಲಿ ಪ್ರಕಾಶ್‌ ಬೆಳವಾಡಿ ನಟಿಸಿರುವ ‘ಸಿಗ್ನಲ್‌ ಮ್ಯಾನ್‌ 1971’ ಸಿನಿಮಾ ಆಗಸ್ಟ್‌ನಲ್ಲಿ ತೆರೆಕಾಣಲಿದೆ. 1971ರ ಇಂಡೋ – ಪಾಕ್‌ ಯುದ್ಧದ ಹಿನ್ನೆಲೆಯಲ್ಲಿ ನಡೆಯುವ ಕಥಾವಸ್ತು ಇದು. ವೆಂಕಟೇಶ್‌ ಪ್ರಸಾದ್‌, ರಾಜೇಶ್‌ ನಟರಂಗ ಚಿತ್ರದ ಇತರೆ ಪ್ರಮುಖ ಕಲಾವಿದರು.

‘ಯಾರೂ ಇಳಿಯದ, ಹತ್ತದ ರೈಲ್ವೆ ನಿಲ್ದಾಣದಲ್ಲಿ ಇಪ್ಪತ್ತು ವರ್ಷಗಳ ಕಾಲ ಕಾರ್ಯನಿರ್ವಹಿಸುವ ‘ಸಿಗ್ನಲ್ ಮ್ಯಾನ್’ ಒಬ್ಬನ ಜೀವನದ ಕತೆಯಿದು. ಇಪ್ಪತ್ತು ವರ್ಷಗಳ ಕಾಲ ಜನಸಂಪರ್ಕವಿಲ್ಲದ ಸ್ಥಳದಲ್ಲಿದ್ದ ಈತ ಗೊಂದಲಕ್ಕೀಡಾಗುತ್ತಾನೆ. ಗೊಂದಲದಿಂದ ಆಚೆ ಬಂದ ನಂತರ ರಾಜ್ಯ ಹಾಗೂ ರಾಷ್ಟ್ರಕ್ಕೆ ಬೇಕಾಗುವ ವ್ಯಕ್ತಿಯಾಗುತ್ತಾನೆ’ ಎಂದು ತಮ್ಮ ಸಿನಿಮಾದ ಕತೆಯ ಬಗ್ಗೆ ಹೇಳುತ್ತಾರೆ ನಿರ್ದೇಶಕ ಕೆ ಶಿವರುದ್ರಯ್ಯ. ಬಹುಭಾಷಾ ನಟ ಪ್ರಕಾಶ್‌ ಬೆಳವಾಡಿ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. 1971ರಲ್ಲಿ ನಡೆದ ಇಂಡೋ – ಪಾಕ್ ಕದನದ ಹಿನ್ನೆಲೆಯನ್ನು ಈ ಚಿತ್ರದಲ್ಲಿ ಅಳವಡಿಸಿಕೊಡಲಾಗಿದೆ ಎನ್ನುವುದು ವಿಶೇಷ. ಇಂಥದ್ದೊಂದು ವಿಶಿಷ್ಟ ಕಥಾಹಂದರದ ಸಿನಿಮಾ ಆಗಸ್ಟ್‌ನಲ್ಲಿ ತೆರೆಕಾಣಲಿದೆ.

ಚಿತ್ರದ ಬಹುಪಾಲು ಚಿತ್ರೀಕರಣ ಊಟಿಯಲ್ಲಿ ನಡೆದಿದೆ. ಗಣೇಶ್ ಪ್ರಭು ನಿರ್ಮಾಣ, ಶೇಖರ್ ಚಂದ್ರು ಛಾಯಾಗ್ರಹಣ, ಸುರೇಶ್ ಅರಸ್ ಸಂಕಲನ, ಒಸೆಪಚ್ಚನ್ ಸಂಗೀತ ನಿರ್ದೇಶನ ಹಾಗೂ ಸಂತೋಷ್ ಪಾಂಚಾಲ್ ಕಲಾ ನಿರ್ದೇಶನ ಚಿತ್ರಕ್ಕಿದೆ. ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಚೆನ್ನೈ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಹಾಗೂ ಬಾಂಗ್ಲಾದೇಶದಲ್ಲಿ ನಡೆದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ಹಲವು ಚಿತ್ರೋತ್ಸವಗಳಲ್ಲಿ ಚಿತ್ರ ಪ್ರದರ್ಶನ ಕಂಡಿದೆ. ಹಿಂದೂಸ್ಥಾನ್ ಮುಕ್ತ ಮೀಡಿಯಾ ಎಂಟರ್‌ಟೇನರ್‌ ಲಾಂಛನದಲ್ಲಿ ಗಣೇಶ್ ಪ್ರಭು ಬಿ ವಿ ಸಿನಿಮಾ ನಿರ್ಮಿಸಿದ್ದಾರೆ. ರಾಜೇಶ್ ನಟರಂಗ, ವೆಂಕಟೇಶ್ ಪ್ರಸಾದ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

LEAVE A REPLY

Connect with

Please enter your comment!
Please enter your name here