ಪುತ್ರ ಅದ್ವೆ ಅವರಿಗಾಗಿ ನಟ ರವಿಶಂಕರ್‌ ನಿರ್ದೇಶಿಸುತ್ತಿರುವ ‘ಸುಬ್ರಹ್ಮಣ್ಯ’ ಬಹುಭಾಷಾ ಸಿನಿಮಾ ಪ್ರೀ ಲುಕ್‌ ರಿಲೀಸ್‌ ಆಗಿದೆ. ಇದೊಂದು ಫ್ಯಾಂಟಸಿ – ಅಡ್ವೆಂಚರ್‌ ಸಿನಿಮಾ. ಈಗಾಗಲೇ ಚಿತ್ರದ ಶೇ 60ರಷ್ಟು ಚಿತ್ರೀಕರಣ ಪೂರ್ಣಗೊಂಡಿದೆ.

‘ಆರ್ಮುಗಂ’ ಖ್ಯಾತಿಯ ನಟ ರವಿಶಂಕರ್‌ ತಮ್ಮ ಪುತ್ರ ಅದ್ವೆ ಅವರಿಗಾಗಿ ಮತ್ತೆ ನಿರ್ದೇಶನಕ್ಕಿಳಿದಿದ್ದಾರೆ. ಅವರು ನಿರ್ದೇಶಿಸುತ್ತಿರುವ ‘ಸುಬ್ರಹ್ಮಣ್ಯ’ ಫ್ಯಾಂಟಸಿ – ಅಡ್ವೆಂಚರ್‌ ಸಿನಿಮಾದ ಪ್ರೀ ಲುಕ್‌ ರಿಲೀಸ್‌ ಆಗಿದೆ. ಪಾಳು ಬಿದ್ದಿರುವ ದೇಗುಲದ ಮುಂದೆ ನಾಯಕ ಅದ್ವೆ ಕೈಯಲ್ಲಿ ಪಂಜು ಹಿಡಿದು ಬ್ಯಾಕ್ ಪೋಸ್ ಕೊಟ್ಟಿದ್ದಾರೆ. ಕುತೂಹಲ ಹೆಚ್ಚಿಸುವ ಪ್ರೀ ಲುಕ್ ಫಸ್ಟ್ ಲುಕ್ ನಿರೀಕ್ಷೆ ಹೆಚ್ಚಿಸಿದೆ. ಸಿನಿಮಾದ 60% ಭಾಗದ ಶೂಟಿಂಗ್ ಮುಕ್ತಾಯಗೊಂಡಿದ್ದು, ಸದ್ಯ ಮುಂಬೈನ ಶಾರುಖ್ ಒಡೆತನದ ರೆಡ್ ಚಿಲ್ಲೀಸ್ ಸ್ಟುಡಿಯೋದಲ್ಲಿ ಪೋಸ್ಟ್ – ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ. ಜೊತೆಗೆ VFX ಮತ್ತು CGI ಕೆಲಸಗಳೂ ನಡೆಯುತ್ತಿವೆ. ಪ್ರೀಮಿಯಂ ಲಾರ್ಜ್ ಫಾರ್ಮ್ಯಾಟ್ ಮತ್ತು ಐಮ್ಯಾಕ್ಸ್ ಥಿಯೇಟರ್‌ಗಳಲ್ಲಿ ಅದ್ಭುತ ಫೀಲ್ ಕೊಡುವ ರೀತಿಯಲ್ಲಿ ಸುಬ್ರಹ್ಮಣ್ಯ ಸಿನಿಮಾವನ್ನು ಕಟ್ಟಿಕೊಡಲಾಗುತ್ತಿದೆ ಎನ್ನುತ್ತಾರೆ ನಿರ್ದೇಶಕ ರವಿಶಂಕರ್‌.

ಸದ್ಯದಲ್ಲೇ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನ್ನು ಅನಾವರಣಗೊಳಿಸಲು ಚಿತ್ರತಂಡ ಮುಂದಾಗಿದೆ. ಈ ಪೋಸ್ಟರ್ ಮೂಲಕ ಸುಬ್ರಹ್ಮಣ್ಯ ಪ್ರಪಂಚವನ್ನು ಚಿತ್ರತಂಡ ಪರಿಚಯಸಲು ಹೊರಟಿದೆ. ಈ ಸೋಷಿಯೋ ಫ್ಯಾಂಟಸಿ ಅಡ್ವೆಂಚರ್ಸ್ ಜಾನರ್‌ ಚಿತ್ರವನ್ನು ತಿರುಮಲ ರೆಡ್ಡಿ ಮತ್ತು ಅನಿಲ್ ಕಡಿಯಾಲ ನಿರ್ಮಿಸುತ್ತಿದ್ದಾರೆ. ರವಿ ಬಸ್ರೂರ್ ಸಂಗೀತ, ವಿಘ್ನೇಶ್‌ ರಾಜ್‌ ಛಾಯಾಗ್ರಹಣ, ವಿಜಯ್‌ ಎಂ ಕುಮಾರ್‌ ಸಂಕಲನ ಚಿತ್ರಕ್ಕಿದೆ. 20 ವರ್ಷಗಳ ಹಿಂದೆ ಮಾಲಾಶ್ರೀ ಅವರಿಗೆ (ದುರ್ಗಿ) ಮೊದಲ ಬಾರಿಗೆ ಪಿ ರವಿಶಂಕರ್ ಆ್ಯಕ್ಷನ್ ಕಟ್ ಹೇಳಿದ್ದರು. ನಂತರದ ದಿನಗಳಲ್ಲಿ ನಟನೆಯಲ್ಲಿ ಬ್ಯುಸಿಯಾದ ಅವರು ಪುತ್ರನ ಸಿನಿಮಾಗಾಗಿ ಮತ್ತೆ ನಿರ್ದೇಶನಕ್ಕಿಳಿದಿದ್ದಾರೆ.

LEAVE A REPLY

Connect with

Please enter your comment!
Please enter your name here