ರಂಜಿತ್‌ ನಿರ್ದೇಶನದ ‘ಸಪ್ಲೇಯರ್‌ ಶಂಕರ’ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ. ನಿಶ್ಚಿತ್‌ ಕರೋಡಿ ಮತ್ತು ದೀಪಿಕಾ ಆರಾಧ್ಯ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಆರ್ ಬಿ ಭರತ್ ಸಂಗೀತ ಸಂಯೋಜನೆಯ ಸಿನಿಮಾ ಶೀಘ್ರ ತೆರೆಕಾಣಲಿದೆ.

ಮತ್ತೊಂದು ಹೊಸಬರ ತಂಡದ ಸಿನಿಮಾ ತೆರೆಗೆ ಸಿದ್ಧವಾಗಿದೆ. ರಂಜಿತ್‌ ಚೊಚ್ಚಲ ನಿರ್ದೇಶನದ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ. ತಮ್ಮ ಸಿನಿಮಾ ಕುರಿತು ಮಾತನಾಡುವ ರಜಿತ್‌, ‘ಕಳೆದ ವರ್ಷ ಫೆಬ್ರವರಿಯಲ್ಲಿ ಈ ಚಿತ್ರಕ್ಕೆ ಚಾಲನೆ ದೊರೆಯಿತು. ಬಾರ್ ಸಪ್ಲೇಯರ್ ಒಬ್ಬನ ಕತೆಯಿದು. ನಾನೇ ಕತೆ ಬರೆದಿದ್ದೇನೆ. ಈ ಪಾತ್ರಕ್ಕಾಗಿ ನಾಯಕ ನಿಶ್ಚಿತ್ ಕರೋಡಿ ಬಹಳ ಶ್ರಮಪಟ್ಟಿದ್ದಾರೆ. ನನ್ನ ಕಥೆಗೆ ಜೀವ ತುಂಬಿದ್ದು ನಿರ್ಮಾಪಕರಾದ ಚಂದ್ರಶೇಖರ್ ಹಾಗೂ ನಾಗೇಂದ್ರ ಸಿಂಗ್. ಶೀಘ್ರದಲ್ಲೇ ಸಪ್ಲೇಯರ್ ಶಂಕರ ಚಿತ್ರಮಂದಿರಗಳಿಗೆ ಬರಲಿದ್ದಾರೆ’ ಎನ್ನುತ್ತಾರೆ. ತ್ರಿನೇತ್ರ ಫಿಲಂಸ್ ಲಾಂಛನದಲ್ಲಿ ಎಂ ಚಂದ್ರಶೇಖರ್ ಹಾಗೂ ಎಂ ನಾಗೇಂದ್ರ ಸಿಂಗ್ ಚಿತ್ರವನ್ನು ನಿರ್ಮಿಸಿದ್ದಾರೆ.

”ನಾನು ಈ ಹಿಂದೆ ‘ಗಂಟು ಮೂಟೆ’, ‘ಟಾಮ್ & ಜೆರ್ರಿ’ ಚಿತ್ರಗಳಲ್ಲಿ ನಟಿಸಿದ್ದೆ. ಇದು ನನ್ನ ಮೂರನೇ ಚಿತ್ರ. ಬಾರ್ ಸಪ್ಲೇಯರ್ ಪಾತ್ರ ನನ್ನದು. ಹಾಗಾಂತ ಈ ಚಿತ್ರದಲ್ಲಿ ಬರೀ ಸಪ್ಲೇಯರ್ ಕತೆ ಮಾತ್ರ ಇಲ್ಲ. ಕಾಮಿಡಿ, ಸೆಂಟಿಮೆಂಟ್, ಲವ್, ಥ್ರಿಲ್ಲರ್ ಎಲ್ಲವೂ ಇದೆ. ನಿರ್ದೇಶಕ ರಂಜಿತ್ ಒಳ್ಳೆಯ ಕತೆ ಆಯ್ಕೆ ಮಾಡಿಕೊಂಡಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ’ ಎನ್ನುತ್ತಾರೆ ಹೀರೋ ನಿಶ್ಚಿತ್‌ ಕರೋಡಿ. ನಾಯಕಿ ದೀಪಿಕಾ ಆರಾಧ್ಯ ಚಿತ್ರದಲ್ಲಿ ಶಿಕ್ಷಕಿ ಪಾತ್ರ ನಿರ್ವಹಿಸಿದ್ದಾರೆ. ಆರ್ ಬಿ ಭರತ್ ಸಂಗೀತ ಸಂಯೋಜನೆ, ಸತೀಶ್ ಕುಮಾರ್ ಛಾಯಾಗ್ರಹಣ, ಸತೀಶ್‌ ಚಂದ್ರಯ್ಯ ಸಂಕಲನ ಚಿತ್ರಕ್ಕಿದೆ.

LEAVE A REPLY

Connect with

Please enter your comment!
Please enter your name here