ಬಿಗ್‌ಬಾಸ್‌ ಖ್ಯಾತಿಯ ರಾಜೀವ್‌ ಹನು ನಟನೆಯ ‘ಉಸಿರೇ ಉಸಿರೇ’ ಸಿನಿಮಾ ಇದೇ ಮೇ 13ರಂದು ತೆರೆಕಾಣುತ್ತಿದೆ. ಪ್ರದೀಪ್‌ ಯಾದವ್‌ ನಿರ್ಮಾಣದ ಚಿತ್ರವನ್ನು ವಿಜಯ್‌ ನಿರ್ದೇಶಿಸಿದ್ದಾರೆ. ಚಿತ್ರದ ಬಿಡುಗಡೆ ಹಂತದಲ್ಲಿ ನಿರ್ದೇಶಕ ವಿಜಯ್‌ ಸಂಪರ್ಕಕ್ಕೆ ಸಿಗದೆ ತೊಂದರೆ ಕೊಡುತ್ತಿದ್ದಾರೆ ಎಂದು ನಿರ್ಮಾಪಕ ಪ್ರದೀಪ್‌ ಯಾದವ್‌ ದೂರಿದ್ದಾರೆ.

‘ನಾನು ಈ ಚಿತ್ರಕ್ಕಾಗಿ ಐದು ವರ್ಷಗಳ ಕಾಲ ಶ್ರಮಪಟ್ಟಿದ್ದೇನೆ. ಈ ಸಮಯದಲ್ಲಿ ಬೇರೆ ಯಾವ ಚಿತ್ರಗಳನ್ನು ಒಪ್ಪಿಕೊಂಡಿಲ್ಲ. ಈಗ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಮೇ 3ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ನನ್ನ ಅಣ್ಣನ ಸ್ಥಾನದಲ್ಲಿರುವ ಕಿಚ್ಚ ಸುದೀಪ್ ಅವರು ಈ ಚಿತ್ರದ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುವುದರ ಮೂಲಕ ನಮಗೆ ಪ್ರೋತ್ಸಾಹ ನೀಡಿದ್ದಾರೆ’ ಎನ್ನುತ್ತಾರೆ ‘ಉಸಿರೇ ಉಸಿರೇ’ ಚಿತ್ರದ ಹೀರೋ ರಾಜೀವ್‌ ಹನು. Bigg Boss ಖ್ಯಾತಿಯ ರಾಜೀವ್‌ ನಟನೆಯ ಈ ಸಿನಿಮಾ ಕಾರಣಾಂತರಗಳಿಂದ ತಡವಾಗಿತ್ತು. ಕೊನೆಗೆ ಇದೇ ಮೇ 3ರಂದು ರಿಲೀಸ್‌ ದಿನಾಂಕ ನಿಗದಿಯಾಗಿದೆ. ನೈಜ ಘಟನೆ ಆಧರಿಸಿದ ಈ ಚಿತ್ರವನ್ನು ಪ್ರದೀಪ್‌ ಯಾದವ್‌ ನಿರ್ಮಿಸಿದ್ದಾರೆ.

ಚಿತ್ರದ ಬಿಡುಗಡೆ ಹಂತದಲ್ಲಿ ನಿರ್ದೇಶಕ ವಿಜಯ್‌ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ನಿರ್ಮಾಪಕ ಪ್ರದೀಪ್‌ ಯಾದವ್‌ ಬೇಸರ ವ್ಯಕ್ತಪಡಿಸುತ್ತಾರೆ. ಈ ಬಗ್ಗೆ ತಮ್ಮ ಅಳಲು ತೋಡಿಕೊಂಡಿರುವ ಅವರು, ‘ನನಗೆ ಚಿತ್ರರಂಗ ಹೊಸತು. ನಿರ್ದೇಶಕ ವಿಜಯ್ ಅವರು ಈ ಚಿತ್ರದ ಕಥೆ ಹೇಳಿ ನಿರ್ಮಾಣಕ್ಕೆ ಕರೆತಂದರು. ಕಿಚ್ಚ ಸುದೀಪ್ ಅವರು ಆರಂಭದಿಂದಲೂ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ನಾಯಕ ರಾಜೀವ್ ಹಾಗೂ ಚಿತ್ರತಂಡದ ಸಹಕಾರವನ್ನು ಈ ಸಮಯದಲ್ಲಿ ನೆನಪಿಸಿಕೊಳ್ಳುತ್ತೇನೆ. ಆದರೆ ನಮ್ಮ ಚಿತ್ರದ ನಿರ್ದೇಶಕ ಸಿ ಎಂ ವಿಜಯ್ ಕೆಲವು ತಿಂಗಳುಗಳಿಂದ ನಮ್ಮ ಸಂಪರ್ಕದಲ್ಲಿಲ್ಲ. ಫೋನ್ ಕರೆ ಸ್ವೀಕರಿಸುತ್ತಿಲ್ಲ. ಅವರಿಂದ ನನಗೆ ಬಹಳ ನಷ್ಟವಾಗಿದೆ. ಚಿತ್ರ ಬಿಡುಗಡೆಯ ಸಮಯದಲ್ಲಿ ನಮ್ಮ ಜೊತೆ ಅವರು ನಿಂತಿಲ್ಲ. ಹೇಳಿದ ದುಡ್ಡಿಗಿಂತ ಹೆಚ್ಚು ಖರ್ಚು ಮಾಡಿಸಿದ್ದಾರೆ. ಅದರಿಂದ ನನಗೆ ತುಂಬಾ ಅನಾನುಕೂಲವಾಗಿದೆ. ಯಾವ ಹೊಸ ನಿರ್ಮಾಪಕರಿಗೂ ಈ ರೀತಿ ಆಗಬಾರದು’ ಎಂದರು. ಶ್ರೀಜಿ ಘೋಷ್‌ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ದೇವರಾಜ್, ತಾರಾ, ಸುಚೇಂದ್ರ ಪ್ರಸಾದ್, ಬ್ರಹ್ಮಾನಂದಂ, ಅಲಿ, ಸಾಧುಕೋಕಿಲ, ಮಂಜು ಪಾವಗಡ ಇತರೆ ಪ್ರಮುಖ ಪಾತ್ರಗಳಲ್ಲಿದ್ದಾರೆ.

LEAVE A REPLY

Connect with

Please enter your comment!
Please enter your name here