ವರ್ತೂರು ಸಂತೋಷ್‌ ಅವರಿಗೆ ಮದುವೆ ಆಗಿದೆ, ಮಗು ಇದೆ, ಅವರು ಸುಳ್ಳು ಹೇಳುತ್ತಿದ್ದಾರೆ.. ಎಂದೆಲ್ಲಾ ಸೋಷಿಯಲ್‌ಮೀಡಿಯಾದಲ್ಲಿ ವದಂತಿಗಳು ಹರಿದಾಡಿದ್ದವು. ಈಗ ಬಿಗ್ ಬಾಸ್ ಮನೆಯಲ್ಲಿ ಸ್ವತಃ ಅವರೇ ತಮ್ಮ ಮದುವೆ, ಪತ್ನಿ ಜೊತೆಗಿನ ಭಿನ್ನಾಭಿಪ್ರಾಯಗಳ ಕುರಿತು ಮನಸ್ಸುಬಿಚ್ಚಿ ಮಾತನಾಡಿದ್ದಾರೆ.

ಈ ಸೀಸನ್‌ ಬಿಗ್‌ಬಾಸ್‌ ಶೋನಲ್ಲಿ ಗಮನ ಸೆಳೆಯುತ್ತಿರುವ ಸ್ಪರ್ಧಿಗಳಲ್ಲಿ ವರ್ತೂರು ಸಂತೋಷ್‌ ಪ್ರಮುಖರು. ಹಲವು ಕಾರಣಗಳಿಗಾಗಿ ಸುದ್ದಿಯಲ್ಲಿರುವ ವರ್ತೂರು ಸಂತೋಷ್‌ ಅವರ ಮದುವೆ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಗುಲ್ಲು ಎದ್ದಿತ್ತು. ಅವರಿಗೆ ಮದುವೆ ಆಗಿದೆ, ಮಗು ಇದೆ, ಅವರು ಮದುವೆ ಆಗಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ.. ಎಂದೆಲ್ಲಾ ಸೋಷಿಯಲ್‌ಮೀಡಿಯಾದಲ್ಲಿ ವದಂತಿಗಳು ಹರಿದಾಡುತ್ತಿವೆ. ಈಗ ಬಿಗ್ ಬಾಸ್ ಮನೆಯಲ್ಲಿ ಸ್ವತಃ ವರ್ತೂರ್ ಅವರೇ ತಮ್ಮ ಮದುವೆ, ಪತ್ನಿ ಜೊತೆಗಿನ ಭಿನ್ನಾಭಿಪ್ರಾಯಗಳ ಕುರಿತು ಮನಸ್ಸುಬಿಚ್ಚಿ ಮಾತನಾಡಿದ್ದಾರೆ. ಇಂದು ಪ್ರಸಾರವಾಗಲಿರುವ ಶೋನಲ್ಲಿ ವರ್ತೂರು ತಮ್ಮ ವೈವಾಹಿಕ ಜೀವನದ ಕೆಲ ಘಟನೆಗಳನ್ನು ಹಂಚಿಕೊಂಡಿದ್ದಾರೆ.

ಅಚ್ಚರಿಯ ಬೆಳವಣಿಗೆಯಲ್ಲಿ ಹುಲಿ ಉಗುರು ಇಟ್ಟುಕೊಂಡಿದ್ದ ಕಾರಣಕ್ಕೆ ಬಿಗ್‌ಬಾಸ್ ರಿಯಾಲಿಟಿ ಶೋನಿಂದ ವರ್ತೂರು ಸಂತೋಷ್‌ ಹೊರಗೆ ಹೋಗಿದ್ದರು. ನಂತರ ಮತ್ತೆ ಮನೆಯೊಳಗೆ ಸೇರಿಕೊಂಡಿದ್ದರು. ಅದಾದಮೇಲೂ ‘ನಾನು ಇಲ್ಲಿ ಇರಲಾರೆ. ಹೊರಗೆ ಹೋಗುತ್ತೇನೆ’ ಎಂದು ಅತ್ತೂ ಕರೆದಿದ್ದೂ ಆಗಿತ್ತು. ಯಾರ ಮಾತನ್ನೂ ಕೇಳದ ಅವರು ಕೊನೆಗೆ ಅಮ್ಮ ಬಂದು ಸಮಾಧಾನ ಮಾಡಿದ ಮೇಲೆ ಮನೆಯೊಳಗೆ ಇರಲು ಒಪ್ಪಿ ಮುಂದುವರಿದಿದ್ದರು. ಆ ನಂತರ ಮನೆಯೊಳಗಿನ ಟಾಸ್ಕ್‌ಗಳಲ್ಲಿ ಭಾಗವಹಿಸುತ್ತ, ಮನೆಯಲ್ಲಿ ತಮ್ಮ ಅಭಿಪ್ರಾಯವನ್ನು ಗಟ್ಟಿ ಧ್ವನಿಯಲ್ಲಿ ಮಂಡಿಸುತ್ತ ಬಂದಿರುವ ವರ್ತೂರ್‍ ಅವರು ಕಳಪೆ ಪ್ರದರ್ಶನಕ್ಕಾಗಿ ಬಿಗ್‌ಬಾಸ್‌ ಮನೆಯ ಜೈಲಿಗೂ ಹೋಗಿಬಂದಿದ್ದರು. ಇದೀಗ ಮೊದಲ ಬಾರಿ ತಮ್ಮ ಬದುಕಿನ ಕೆಲ ಘಟನೆಗಳನ್ನು ಬಿಗ್‌ಬಾಸ್‌ ಮನೆಯಲ್ಲಿ ಹಂಚಿಕೊಂಡಿದ್ದಾರೆ.

LEAVE A REPLY

Connect with

Please enter your comment!
Please enter your name here